Publish Date: Sat, 03 Feb 2018 (19:14 IST)
Updated Date: Sat, 03 Feb 2018 (19:16 IST)
ಕೊನೆಯುಸಿರು ಇರುವವರೆಗೆ ಬಿಜೆಪಿ ತೊರೆಯುವುದಿಲ್ಲ ಎಂದು ಮಾಜಿ ಸಚಿವ ರಾಮದಾಸ ಘೋಷಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಎಲ್ಲರೀತಿಯ ಅವಕಾಶಗಳನ್ನು ಪಡೆದುಕೊಂಡಿದ್ದೇನೆ. ಆದ್ದರಿಂದ ಕೊನೆಯುಸಿರು ಇರುವವರೆ ಬಿಜೆಪಿಯಲ್ಲೇ ಇರುತ್ತೇನೆ ಎಂದಿದ್ದಾರೆ.
ಬಿಜೆಪಿ ತೊರೆದು ಜೆಡಿಎಸ್ ಸೇರುವ ಬಗ್ಗೆ ಕೇಳಿಬರುತ್ತಿರುವ ಊಹಾಪೋಹಗಳಿಗೆ ತೆರೆ ಎಳೆದ ಅವರು, ಚುನಾವಣೆಯ ಸಂದರ್ಭದಲ್ಲಿ ಇಂತಹ ಹೇಳಿಕೆಗಳು ಸಾಮಾನ್ಯ. ಇವುಗಳಿಗೆಲ್ಲ ಅಂಜುವುದಿಲ್ಲ. ಚುನಾವಣೆಯಲ್ಲಿ ಟಿಕೆಟ್ ಸಿಗಲಿ, ಬಿಡಲಿ ಪಕ್ಷ ವಹಿಸುವ ಜವಾಬ್ದಾರಿ ನಿಭಾಯಿಸುತ್ತೇನೆ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.