Webdunia - Bharat's app for daily news and videos

Install App

ಬಿಜೆಪಿ ಮೂವರು ಸಿಎಂಗಳ ಆಸ್ತಿಯ ತನಿಖೆಯಾಗಲಿ: ಉಗ್ರಪ್ಪ ಸವಾಲ್

Webdunia
ಮಂಗಳವಾರ, 21 ಫೆಬ್ರವರಿ 2017 (20:51 IST)
ಬಿಜೆಪಿ ಪಕ್ಷದ ಮೂವರು ಮುಖಂಡರು ಸಿಎಂ ಆಗುವ ಮೊದಲು ಎಷ್ಟು ಆಸ್ತಿ ಹೊಂದಿದ್ದರು, ಇದೀಗ ಎಷ್ಟು ಆಸ್ತಿ ಹೊಂದಿದ್ದಾರೆ ಎನ್ನುವ ಬಗ್ಗೆ ತನಿಖೆಗೆ ಸಿದ್ದರಾಗಿದ್ದಾರೆಯೇ ಎಂದು ಹಿರಿಯ ಕಾಂಗ್ರೆಸ್ ಮುಖಂಡ ವಿ.ಎಸ್.ಉಗ್ರಪ್ಪ ಸವಾಲ್ ಹಾಕಿದ್ದಾರೆ. 
 
ಬಿಜೆಪ ಸರಕಾರದ ಐದು ವರ್ಷಗಳ ಅವಧಿಯಲ್ಲಿ ಮೂವರು ಬಿಜೆಪಿ ಮುಖಂಡರು ಸಿಎಂ ಹುದ್ದೆ ಅಲಂಕರಿಸಿದ್ದಾರೆ. ಅವರ ಆಸ್ತಿಯ ಬಗ್ಗೆ ತನಿಖೆ ನಡೆಸಿದರೆ ಸತ್ಯಾಸತ್ಯತೆ ಬಹಿರಂಗವಾಗಲಿದೆ ಎಂದು ಗುಡುಗಿದ್ದಾರೆ.
 
ನಗರದಲ್ಲಿ ಆಯೋಜಿಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಅಧಿಕಾರಕ್ಕೆ ಬಂದ್ರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಸಹದ್ಯೋಗಿ ಸಚಿವರನ್ನು ಜೈಲಿಗೆ ಕಳುಹಿಸುವುದಾಗಿ ಮಾನಸಿಕ ಅಸ್ವಸ್ಥರಂತೆ ಹೇಳಿಕೆ ನೀಡುತ್ತಿದ್ದಾರೆ. ಯಡಿಯೂರಪ್ಪ ಮುಂದೆ ಯಾವತ್ತೂ ಸಿಎಂ ಆಗುವುದಿಲ್ಲ  ಎನ್ನುವುದನ್ನು ನೆನಪಿಡಲಿ ಎಂದು ವ್ಯಂಗ್ಯವಾಡಿದರು.
 
ಒಂದು ವೇಳೆ ಕಾಂಗ್ರೆಸ್ ಸರಕಾರ ಭ್ರಷ್ಟಾಚಾರ ಮಾಡಿದ್ದರೆ ದಾಖಲೆಗಳನ್ನು ಬಿಡುಗಡೆ ಮಾಡಲಿ. ಇಲ್ಲವೇ ಸಂಬಂಧಪಟ್ಟ ಇಲಾಖೆಗಳಿಗೆ ನೀಡಿ ತನಿಖೆಗೆ ಒತ್ತಾಯಿಸಲಿ. ಅದನ್ನು ಬಿಟ್ಟು ದಾಖಲೆಗಳಿಲ್ಲದೇ ಆರೋಪ ಮಾಡುವುದು ಯಡಿಯೂರಪ್ಪನಂತಹವರಿಗೆ ಶೋಭೆ ತರುವುದಿಲ್ಲ ಎಂದು ತಿರುಗೇಟು ನೀಡಿದರು.
 
ಯಡಿಯೂರಪ್ಪನವರ ವಿರುದ್ಧವೇ ಭ್ರಷ್ಟಾಚಾರದ 21 ಕೇಸ್‌ಗಳು ಬಾಕಿ ಉಳಿದಿವೆ. ಭ್ರಷ್ಟಾಚಾರ ವಿರೋಧಿಯಂತೆ ಮಾತನಾಡುತ್ತಾರೆ ಎಂದು ಲೇವಡ ಮಾಡಿದರು. ನಿಮ್ಮ ಬಳಿ ದಾಖಲೆಗಳಿದ್ದರೆ ಬಹಿರಂಗಪಡಿಸಿ. ಇಲ್ಲವಾದಲ್ಲಿ ಸಾರ್ವಜನಿಕವಾಗಿ ಕ್ಷಮೆಯಾಚಿಸಿ ಎಂದು ಹಿರಿಯ ಕಾಂಗ್ರೆಸ್ ಮುಖಂಡ ವಿ.ಎಸ್.ಉಗ್ರಪ್ಪ ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟರ್ಕಿ ಮೇಲೆ ಒಂದೊಂದೆ ಪ್ರತೀಕಾರ ತೀರಿಸುತ್ತಿರುವ ಭಾರತ: ವಿಮಾನಯಾನ ಸಂಸ್ಥೆಯ ಲೈಸನ್ಸ್‌ ರದ್ದು ಮಾಡಿದ ಭಾರತ

ಸೋಫಿಯಾ ಖುರೇಷಿ ವಿರುದ್ಧ ವಿವಾದಾತ್ಮಕ ಹೇಳಿಕೆ: ಬೆಳಗಾವಿಯಲ್ಲಿ ವಿಜಯ್ ಶಾ ವಿರುದ್ಧ ದೂರು

ಸೇನಾಧಿಕಾರಿ ಖುರೇಷಿ ಅತ್ತೆ ಮಾವನ ಮನೆ ಮೇಲೆ ದಾಳಿ ಪೋಸ್ಟ್‌: ಮೂವರ ವಿರುದ್ಧ ಪ್ರಕರಣ ದಾಖಲು

ಬರ್ತಡೇ ಆಚರಿಸಲ್ಲ ಅಂತಾ ಹೇಳಿ ನೆನಪಿನಲ್ಲಿ ಉಳಿದುಕೊಳ್ಳುವ ಹಾಗೇ ದಿನ ಕಳೆದ ಡಿಸಿಎಂ ಡಿಕೆ ಶಿವಕುಮಾರ್‌: Video

ಪಾಕ್‌ಗೆ ಸಹಾಯ ಮಾಡಿದ ಟರ್ಕಿ: ಟರ್ಕಿ ಆ್ಯಪಲ್ ಬ್ಯಾನ್ ಮಾಡಲು ಭಾರತದಲ್ಲಿ ಹೆಚ್ಚಿದ ಒತ್ತಾಯ

ಮುಂದಿನ ಸುದ್ದಿ
Show comments