Publish Date: Wed, 01 Apr 2026 (19:38 IST)
Updated Date: Wed, 01 Apr 2026 (19:40 IST)
ಬೆಂಗಳೂರು: ಆಕ್ಷೇಪಾರ್ಹ ಹೇಳಿಕೆ ಹಾಗೂ ಪ್ರಚಾರಕ್ಕೆ ಸರ್ಕಾರಿ ನೌಕರರ ಬಳಕೆ ಸಂಬಂಧ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ರಾಜ್ಯ ಬಿಜೆಪಿ ನಿಯೋಗ ಚುನಾವಣಾ ಆಯೋಗಕ್ಕೆ ದೂರನ್ನು ಣಿಡಿದೆ.
ಶಾಸಕ ಸಿಕೆ ರಾಮಮೂರ್ತಿ ಅವರು ದೂರನ್ನು ನೀಡಿಮ ಶಾಸಕ ಪ್ರದೀಪ್ ಈಶ್ವರ್ ಬಿಜೆಪಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಪ್ರದೀಪ್ ಈಶ್ವರ್ ಒಬ್ಬ ಹುಚ್ಚ. ನಮ್ಮ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದು ಸಂವಿಧಾನ ವಿರೋಧಿ. ಹೀಗಾಗಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. .
ಇನ್ನು ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಚಂದ್ರಶೇಖರ್ ನುಗ್ಲಿ ಹಾಗೂ ಇತರೆ ಶಿಕ್ಷಕರು ಪ್ರಚಾರ ನಡೆಸಿದ್ದರು. ಸರ್ಕಾರಿ ನೌಕರರಾಗಿದ್ದು ಕಾಂಗ್ರೆಸ್ ಪರವಾಗಿ ಪ್ರಚಾರ ನಡೆಸಿದ್ದಕ್ಕೆ ಕ್ರಮಕ್ಕೆ ಕೈಗೊಳ್ಳಬೇಕೆಂದಿದ್ದಾರೆ.
ಚಂದ್ರಶೇಖರ್ ನುಗ್ಲಿ ಎಂಬ ಶಿಕ್ಷಕ ಕಾಂಗ್ರೆಸ್ ಪರ ಪ್ರಚಾರ ನಡೆಸಿದ್ದಾರೆ. ತಕ್ಷಣ ಅವರನ್ನು ನೌಕರಿಯಿಂದ ವಜಾ ಮಾಡಬೇಕು ಎಂದು ಬಿಜೆಪಿ ಮುಖಂಡ ಎಸ್.ಹರೀಶ್ ಒತ್ತಾಯಿಸಿದ್ದಾರೆ.