Select Your Language

Notifications

webdunia
webdunia
webdunia
webdunia

ರಾಮನಗರ ಚುನಾವಣಾ ಕಣದಲ್ಲಿ ಬಿಗ್ ಟ್ವಿಸ್ಟ್! ಬಿಜೆಪಿಗೆ ಶಾಕ್!

ರಾಮನಗರ ಚುನಾವಣಾ ಕಣದಲ್ಲಿ ಬಿಗ್ ಟ್ವಿಸ್ಟ್! ಬಿಜೆಪಿಗೆ ಶಾಕ್!
ಬೆಂಗಳೂರು , ಗುರುವಾರ, 1 ನವೆಂಬರ್ 2018 (10:06 IST)
ಬೆಂಗಳೂರು: ರಾಮನಗರ ಲೋಕಸಭೆ ಉಪಚುನಾವಣೆಗೆ ಮೊದಲು ಅಭ್ಯರ್ಥಿ ಎಲ್ ಚಂದ್ರಶೇಖರ್ ಬಿಜೆಪಿಗೆ ದೊಡ್ಡ ಶಾಕ್ ಕೊಟ್ಟಿದ್ದಾರೆ.

ಇಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಎಲ್ ಚಂದ್ರಶೇಖರ್ ಚುನಾವಣಾ ಕಣದಿಂದ ಹಿಂದೆ ಸರಿದಿದ್ದು, ಮತ್ತೆ ಕಾಂಗ್ರೆಸ್ ಪಕ್ಷ ಸೇರುತ್ತಿರುವುದಾಗಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಜತೆ ಸುದ್ದಿಗೋಷ್ಠಿ ನಡೆಸಿದ ಚಂದ್ರಶೇಖರ್ ನನ್ನನ್ನು ಬಿಜೆಪಿ ನಾಯಕರು ಸರಿಯಾಗಿ ನಡೆಸಿಕೊಳ್ಳಲಿಲ್ಲ. ಅದಕ್ಕೇ ಚುನಾವಣಾ ಕಣದಿಂದ ಹಿಂದೆ ಸರಿಯುತ್ತಿದ್ದೇನೆ. ನಾನು ಗೆಲ್ಲಬೇಕು ಎಂದು ನಮ್ಮ ನಾಯಕರಿಗೇ ಇಲ್ಲ ಎಂದು ಆರೋಪಿಸಿದ್ದಾರೆ.

ನವಂಬರ್ 3 ರಂದು ಇಲ್ಲಿ ಉಪಚುನಾವಣೆ ನಡೆಯಲಿದ್ದು, ಚುನಾವಣೆಗೆ ಮೊದಲು ಬಿಜೆಪಿಗೆ ದೊಡ್ಡ ಆಘಾತ ಸಿಕ್ಕಿದೆ. ನಾನು ಮೂಲತಃ ಕಾಂಗ್ರೆಸ್ಸಿಗ. ಬಿಜೆಪಿಯಲ್ಲಿ ನಿರಾಶೆಯಾಗಿರುವುದರಿಂದ ಮತ್ತೆ ಕಾಂಗ್ರೆಸ್ ಪಕ್ಷಕ್ಕೇ ಸೇರ್ಪಡೆಯಾಗುತ್ತಿದ್ದೇನೆ ಎಂದು ಚಂದ್ರಶೇಖರ್ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

Share this Story:

Follow Webdunia kannada

ಮುಂದಿನ ಸುದ್ದಿ

ಕನ್ನಡ ರಾಜ್ಯೋತ್ಸವಕ್ಕೆ ಶುಭಕೋರಿದ ದಾಸ ದರ್ಶನ್, ಕಿಚ್ಚ ಸುದೀಪ್, ರಾಜಕೀಯ ಗಣ್ಯರು