ದಕ್ಷಿಣ ಕನ್ನಡದಲ್ಲಿ ಅರುಣ್ ಕುಮಾರ್ ಪುತ್ತಿಲಗೆ ಶಾಕ್ ಕೊಟ್ಟ ಬಿಜೆಪಿ

Krishnaveni K
ಗುರುವಾರ, 14 ಮಾರ್ಚ್ 2024 (09:32 IST)
ಮಂಗಳೂರು: ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಬ್ರಿಜೇಶ್ ಚೌಟಾಗೆ ಈ ಬಾರಿ ಬಿಜೆಪಿ ಟಿಕೆಟ್ ನೀಡಲಾಗಿದೆ. ಈ ಮೂಲಕ ಬಿಜೆಪಿ ಒಂದೇ ಕಲ್ಲಿಗೆ ಎರಡು ಹಕ್ಕಿ ಹೊಡೆದಿದೆ.

ಒಂದು ವೇಳೆ ನಳಿನ್ ಕುಮಾರ್ ಕಟೀಲ್ ಗೆ ನಾಲ್ಕನೇ ಬಾರಿ ಟಿಕೆಟ್ ನೀಡಿದ್ದರೆ ದಕ್ಷಿಣ ಕನ್ನಡದಲ್ಲಿ ಕಾರ್ಯಕರ್ತರಿಂದಲೇ ವಿರೋಧ ವ್ಯಕ್ತವಾಗುತ್ತಿತ್ತು. ಜೊತೆಗೆ ಅರುಣ್ ಕುಮಾರ್ ಪುತ್ತಿಲ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿದ್ದರು. ಆಗ ವಿಧಾನಸಭೆ ಚುನಾವಣೆಯಲ್ಲಿ ನಡೆದಂತೆ ಮತ ವಿಭಜನೆಯಾಗಿ ಬಿಜೆಪಿಗೆ ಸ್ಥಾನ ಕೈತಪ್ಪಿಹೋಗುವ ಭೀತಿಯಿತ್ತು.

ಇದೇ ಕಾರಣಕ್ಕೆ ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯಿಂದ ನಳಿನ್ ಕುಮಾರ್ ಕಟೀಲ್ ಗೆ ಅವಕಾಶ ನೀಡಿಲ್ಲ. ಇದರಿಂದಾಗಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಹೊರಟಿರುವ ಅರುಣ್ ಕುಮಾರ್ ಪುತ್ತಿಲಗೂ ಶಾಕ್ ಕೊಟ್ಟಂತಾಗುತ್ತದೆ. ಜೊತೆಗೆ ಸ್ಥಳೀಯ ಕಾರ್ಯಕರ್ತರ ಆಕ್ರೋಶವೂ ತಣ್ಣಗಾಗಿಸಿದಂತಾಗಿದೆ.

ಈಗ ಅರುಣ್ ಕುಮಾರ್ ಪುತ್ತಿಲ ಬಂಡಾಯ ಅಭ್ಯರ್ಥಿಯಾಗಿ ನಿಂತರೂ ಅವರಿಗೆ ಬೆಂಬಲ ಸಿಗುವುದು ಕಡಿಮೆ. ಯಾಕೆಂದರೆ ದಕ್ಷಿಣ ಕನ್ನಡದ ಬಿಜೆಪಿ ಬೆಂಬಲಿಗರು ಈಗ ಹೇಗಾದರೂ ಸರಿಯೇ ಮತ್ತೊಮ್ಮೆ ಮೋದಿಯನ್ನು ಅಧಿಕಾರಕ್ಕೆ ತರಲು ಬಿಜೆಪಿ ಅಭ್ಯರ್ಥಿಗೇ ಮತ ಹಾಕುವುದಾಗಿ ಕುಳಿತಿದ್ದಾರೆ. ಜೊತೆಗೆ ಅರುಣ್ ಕುಮಾರ್ ಪುತ್ತಿಲಗೆ ಸಪೋರ್ಟ್ ಮಾಡಿ ಬಿಜೆಪಿ ಸೋಲುವುದನ್ನು ಕಾಣಲು ಅಲ್ಲಿನ ಬಿಜೆಪಿ ಬೆಂಬಲಿಗರು ಈ ಬಾರಿ ಖಂಡಿತಾ ಇಷ್ಟಪಡುವುದಿಲ್ಲ. ಹೀಗಾಗಿ ಅತ್ತ ಅರುಣ್ ಕುಮಾರ್ ಗೂ ಶಾಕ್, ಇತ್ತ ಕಾರ್ಯಕರ್ತರ ವಿರೋಧಕ್ಕೂ ತಣ್ಣೀರು ಹಾಕಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೈಸೂರಿಗೆ ಫ್ಲೈ ಓವರ್ ಬೇಡವೇ ಬೇಡ: ಸಿಎಂಗೆ ಪತ್ರ ಬರೆದ ಸಂಸದ ಯದುವೀರ್ ಒಡೆಯರ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಜಿಯೋ ಫೋನ್ ನಲ್ಲಿ ಬಳಸಿದ್ರೆ ಅದಾನಿಗೆ ದುಡ್ಡು: ರಾಹುಲ್ ಗಾಂಧಿ ಹೇಳಿಕೆ ಭಾರೀ ಟ್ರೋಲ್ video

ಹೃದಯದ ಆರೋಗ್ಯಕ್ಕೆ ಡಾ ದೇವಿಪ್ರಸಾದ್ ಶೆಟ್ಟಿಯವರ ಈ ಟಿಪ್ಸ್ ತಪ್ಪದೇ ಫಾಲೋ ಮಾಡಿ

ಮುಂದಿನ ಸುದ್ದಿ
Show comments