ಬಿಜೆಪಿ ಸರ್ಕಾರ ಸ್ವಪಕ್ಷ ಶಾಸಕರನ್ನು ಕಡೆಗಣನೆ ಮಾಡುತ್ತಿದೆ -ಸ್ವಪಕ್ಷದ ವಿರುದ್ಧವೇ ಕಿಡಿಕಾರಿದ ಶಾಸಕ

Webdunia
ಸೋಮವಾರ, 26 ಆಗಸ್ಟ್ 2019 (11:29 IST)
ಚಿತ್ರದುರ್ಗ : ಬಿಜೆಪಿ ಸರ್ಕಾರ ಸ್ವಪಕ್ಷ ಶಾಸಕರನ್ನು ಕಡೆಗಣನೆ ಮಾಡುತ್ತಿದೆ ಎಂದು ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್ ಆರೋಪ ಮಾಡಿದ್ದಾರೆ.



ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿನ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ತಮ್ಮ ಕ್ಷೇತ್ರಕ್ಕೆ ಅನುದಾನ ನೀಡುವ ಕುರಿತು ತಾರತಮ್ಯವಾಗಿತ್ತು. ಇದೀಗ ನಮ್ಮ ಪಕ್ಷದ ಸರ್ಕಾರದಲ್ಲೂ ಈ ತಾರತಮ್ಯ ಮುಂದುವರೆದಿದೆ.  ಪಿಎಸ್‍ ಐ ವರ್ಗಾವಣೆ ವಿಚಾರದಲ್ಲಿ ಶಾಸಕರ ಸ್ವಾತಂತ್ರ್ಯಕ್ಕೆ ಕಡಿವಾಣ ಹಾಕಿದ್ದಾರೆ. ತಮ್ಮ ಕ್ಷೇತ್ರದ ವರ್ಗಾವಣೆ ವಿಚಾರದಲ್ಲಿ ಕೆಲ ಬಿಜೆಪಿ ನಾಯಕರು ಮೂಗು ತೂರಿಸುತ್ತಿದ್ದಾರೆಂದು ಸ್ವಪಕ್ಷದ ವಿರುದ್ಧವೇ ಕಿಡಿಕಾರಿದ್ದಾರೆ.


ಬಿಜೆಪಿಯಲ್ಲಿ ನನ್ನ ಜೊತೆ ಹೆಚ್ಚು ಒಡನಾಟ ಹೊಂದಿರೋ ಆರ್. ಅಶೋಕ್‍ ಗೆ ಉನ್ನತವಾದ ಸ್ಥಾನಮಾನ ಸಿಕ್ಕರೆ ನಮ್ಮ ಕ್ಷೇತ್ರವನ್ನು ಗುರುತಿಸುತ್ತಾರೆ. ಆದ್ದರಿಂದ ಇಂದು ನಾನು ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಅಶೋಕ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಒತ್ತಾಯ ಮಾಡುತ್ತೇನೆ. ನಂತರ ಸಚಿವ ಆರ್.ಅಶೋಕ್ ಜೊತೆ ಚರ್ಚಿಸಿ ಮುಂದಿನ ತೀರ್ಮಾನ ಮಾಡುತ್ತೇನೆ ಎಂದು ಅವರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜೀವನಾಂಶ ಬೇಕೆಂದ ಪತ್ನಿಯನ್ನೇ ಇಹಲೋಕಕ್ಕೆ ಕಳುಹಿಸಿದ ಪತಿ, ಏನಿದು ಕೇಸ್‌

ಬುರ್ಖಾ ಧರಿಸಿ ಹೋಳಿ ಆಟವಾಡಲು ಹೋಗಿ ಕೇಸ್ ಹಾಕಿಸಿಕೊಂಡ ಐವರು

ಖಮೇನಿ ಸಾವಿನ ಬಗ್ಗೆ ಪ್ರತಿಕ್ರಿಯೆ ಕೊಟ್ಟ ಭಾರತ, ಹೇಳಿದ್ದೇನು

ಮೂರು ತಿಂಗಳ ಹಿಂದೆ ಮದುವೆಯಾಗಿದ್ದ ವ್ಯಕ್ತಿ ಹೃದಯಾಘಾತಕ್ಕೆ ಬಲಿ

ಯುದ್ಧವು ಸಮಸ್ಯೆಗಳಿಗೆ ಪರಿಹಾರವಲ್ಲ: ಪ್ರಧಾನಿ ನರೇಂದ್ರ ಮೋದಿ

ಮುಂದಿನ ಸುದ್ದಿ
Show comments