Publish Date: Mon, 30 Sep 2019 (11:59 IST)
Updated Date: Mon, 30 Sep 2019 (12:22 IST)
ರಾಯಚೂರು : ತಂತಿಯ ಮೇಲಿನ ನಡಿಗೆ ಎಂದು ಸಿಎಂ ಬಿಎಸ್ ವೈ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ. ಉಪಚುನಾವಣೆಯ ನಂತರ ಬಿಜೆಪಿ ಸರ್ಕಾರ ಪತನವಾಗಲಿದೆ.
ರಾಯಚೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಯಡಿಯೂರಪ್ಪ ತಂತಿ ಮೇಲೆ ನಡೆದು ಸರ್ಕಾರ ನಡೆಸೋದು ಬೇಡ. ಬಿಎಸ್ ವೈ ರಾಜೀನಾಮೆ ಕೊಟ್ಟು ಮನೆಗೆ ಹೋಗಲಿ ಎಂದು ಹೇಳಿದ್ದಾರೆ.
ಅಲ್ಲದೇ. ಮಧ್ಯಂತರ ಚುನಾವಣೆ ನಡೆಯಲಿದೆ. 15 ಕ್ಷೇತ್ರಗಳಲ್ಲಿ 8 ಕ್ಷೇತ್ರ ಬಿಜೆಪಿ ಗೆಲ್ಲಬೇಕು. ಒಂದು ವೇಳೆ 8 ಕ್ಷೇತ್ರ ಬಿಜೆಪಿ ಗೆಲ್ಲಲು ವಿಫಲವಾದಲ್ಲಿ ಸರ್ಕಾರ ಇರಲ್ಲ ಎಂದು ಅವರು ತಿಳಿಸಿದ್ದಾರೆ.