Webdunia - Bharat's app for daily news and videos

Install App

ಕ್ಯಾಮೆರಾ ಕಂಡರೆ ಬಿಜೆಪಿ ಸರಕಾರ ನಡುಗೋದ್ಯಾಕೆ?

Webdunia
ಶುಕ್ರವಾರ, 11 ಅಕ್ಟೋಬರ್ 2019 (18:23 IST)
ಕ್ಯಾಮೆರಾ ಕಂಡರೆ ಬಿಜೆಪಿಗರಿಗೆ ಏಕೆ ನಡುಕ? ಹೀಗೊಂದು ಪ್ರಶ್ನೆ ಬಲವಾಗಿ ಕೇಳಿಬರಲಾರಂಭಿಸಿದೆ.

ವಿಧಾನಸಭೆ ಕಲಾಪದಲ್ಲಿ ಖಾಸಗಿ ಮಾಧ್ಯಮಗಳನ್ನು ನಿಷೇಧ ಮಾಡಿರೋದನ್ನು ಖಂಡಿಸಿ ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪ್ರತಿಭಟನೆ ನಡೆಸಲಾಯಿತು.

ವಿಧಾನ ಸಭೆ ಕಲಾಪದಲ್ಲಿ ಖಾಸಗಿ ಮಾಧ್ಯಮಗಳ ಕ್ಯಾಮರಾಗಳನ್ನು ನಿಷೇಧ ಮಾಡಿರುವುದನ್ನು ಖಂಡಿಸಿ, ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪ್ರತಿಭಟನೆ ಮಾಡಿ ತಹಸೀಲ್ದಾರ್ ಮೂಲಕ ಸಭಾಧ್ಯಕ್ಷರಿಗೆ ಮನವಿ ಸಲ್ಲಿಸಿದರು.

ಇದಕ್ಕೂ ಮುನ್ನ ಪತ್ರಕರ್ತರ  ಭವನದಿಂದ ತಹಸೀಲ್ದಾರ್ ರ ಕಚೇರಿವರೆಗೆ ರ್ಯಾಲಿ ನಡೆಸಲಾಯಿತು. ಈ ವೇಳೆ ಕಲಾಪದಲ್ಲಿ ಖಾಸಗಿ ಮಾಧ್ಯಮಗಳ ಮೇಲೆ ನಿರ್ಬಂಧ ಹೇರಿರುವುದನ್ನು ಖಂಡಿಸಿ ರಾಜ್ಯ ಸರ್ಕಾರ ಮತ್ತು ಕಲಾಪದ ಸಭಾಧ್ಯಕ್ಷರ ವಿರುದ್ಧ ಪ್ರತಿಭಟನಾ ನಿರತ ಪತ್ರಕರ್ತರು ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.

ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಮಾಧ್ಯಮದ ಮೇಲೆ ಸಭಾಧ್ಯಕ್ಷರು ತೆಗೆದುಕೊಂಡ ನಿರ್ಧಾರ ಖಂಡನೀಯ. ಈ ಮೂಲಕ ಕಲಾಪಗಳನ್ನು ಪಾರದರ್ಶಕತೆಯಿಂದ ದೂರ ಮಾಡುವ ಸಂಚು ರೂಪಿಸಲಾಗಿದೆ. ಈ ಹಿಂದೆ ಕಲಾಪಗಳಲ್ಲಿ ಸಚಿವರು ತೋರಿದ ಘಟನೆಗಳನ್ನು ಈ ಕಾಲದಲ್ಲಿ ನೆನಪಿಸಿಕೊಳ್ಳುವುದು ಸೂಕ್ತವಾಗಿದೆ.

ಅಲ್ಲದೇ ಮಾಧ್ಯಮಗಳ ಮೇಲೆ ನಿರ್ಬಂಧ ಹೇರುವ ಮೂಲಕ ಸರ್ಕಾರ ಮತ್ತು ಜನರ ನಡುವಿನ ಸೇತುವೆಯನ್ನು ಹಾಳು ಮಾಡುವುದೇ ಆಗಿದೆ. ಈ ಕೂಡಲೇ ರಾಜ್ಯ ಸರ್ಕಾರ ಮತ್ತು ಸಭಾಧ್ಯಕ್ಷರು ಖಾಸಗಿ ಮಾಧ್ಯಮಗಳ ಮೇಲೆ ಹೇರಿರುವ ನಿರ್ಬಂಧವನ್ನು ವಾಪಾಸ್ ಪಡೆದು ಮೊದಲಿನಂತೆ ಕಲಾಪಗಳ ದೃಶ್ಯಗಳನ್ನು ಸೆರೆ ಹಿಡಿಯಲು ಅವಕಾಶವನ್ನು ಕಲ್ಪಿಸಬೇಕೆಂದು ಆಗ್ರಹಿಸಿದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments