ಮಲ್ಲೇಶ್ವರದಲ್ಲಿ ಬಿಜೆಪಿಗೆ ಉತ್ತಮ ವಾತಾವರಣವಿದೆ

Webdunia
ಮಂಗಳವಾರ, 25 ಏಪ್ರಿಲ್ 2023 (14:20 IST)
ಬೆಂಗಳೂರಿನ ಮಲ್ಲೇಶ್ವರದಲ್ಲಿ ಬಿಜೆಪಿಗೆ ಉತ್ತಮ ವಾತಾವರಣ ಇದೆ‌. ಕಳೆದ ಬಾರಿಗಿಂತ ಈ ಬಾರಿ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಅಶ್ವತ್ ನಾರಾಯಣ ಇನ್ನೂ ಹಚ್ಚಿನ ಅಂತರದಿಂದ ಗೆಲ್ಲುವ ವಿಶ್ವಾಸದಲ್ಲಿದ್ದಾರೆ.ಈ ಕುರಿತು ಮಾತನಾಡಿದ ಅವರು, ಈ ಕ್ಷೇತ್ರದಲ್ಲಿ ಬ್ರಾಹ್ಮಣರ ಸಂಖ್ಯೆ ಹೆಚ್ಚಿದೆ ಎಂದು ಕಾಂಗ್ರೆಸ್​ನವರು ಬ್ರಾಹ್ಮಣ ಅಭ್ಯರ್ಥಿಯನ್ನೇ ಕಣಕ್ಕಿಳಿಸಿದ್ದಾರೆ. ಆದರೆ, ಮಲ್ಲೇಶ್ವರದ ಜನ ಜಾತಿ ಮೀರಿದವರು. ಎಂದೆಂದೂ ಬಿಜೆಪಿಯನ್ನೇ ಬೆಂಬಲಿಸುತ್ತಾರೆ. ರಾಹುಲ್ ಗಾಂಧಿ ಕೂಡಲಸಂಗಮ ಬಸವಕಲ್ಯಾಣಕ್ಕೆ ಹೋಗಿ ಬಂದ ಮಾತ್ರಕ್ಕೆ ಏನೂ ವ್ಯತ್ಯಾಸವಾಗುವುದಿಲ್ಲ. ನಿಜವಾದ ಬಸವತತ್ವ ಪಾಲನೆ ಮಾಡುತ್ತಿರುವುದು ಬಿಜೆಪಿಯವರು. ಹಾಗಾಗಿ ಲಿಂಗಾಯತ ಸಮುದಾಯ ಬಿಜೆಪಿಯನ್ನು ಬಿಟ್ಟು ಹೋಗುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದ್ರು.. ಈಗ ಸಿದ್ದರಾಮಯ್ಯ ಅವರ ಹೇಳಿಕೆಯಿಂದ ಲಿಂಗಾಯತ ಸಮುದಾಯಕ್ಕೆ ನೋವಾಗಿದೆ. ಮಾಜಿ ಸಿಎಂ ಜಗದೀಶ್ ಶೆಟ್ಡರ್ ಹಾಗೂ ಮಾಜಿ ಡಿಸಿಎಂ ಲಕ್ಷ್ಮಣ್​​ ಸವದಿಗೆ ಪಕ್ಷ ಎಲ್ಲವನ್ನ ಕೊಟ್ಟಿತ್ತು. ಆದರೆ ಟಿಕೆಟ್ ಕಾರಣಕ್ಕೆ ಪಕ್ಷ ಬಿಟ್ಟು ಹೋದರು. ಅಲ್ಲೂ ಕೂಡ ನಾವು ಟಿಕೆಟ್ ಕೊಟ್ಟಿರೋದು ಮತ್ತೊಬ್ಬ ಲಿಂಗಾಯತ ಅಭ್ಯರ್ಥಿಗೆ ತಾನೇ ಎಂದು ಹೇಳಿದ್ರು. ಹೊಸಬರಿಗೆ ಸ್ಥಾನ ಬಿಟ್ಟುಕೊಡುವ ವಿಶಾಲ ಹೃದಯ ಅವರಿಗೆ ಇರಬೇಕಾಗಿತ್ತು. ಈಗ ಅಲ್ಲಿಯೂ ಗೆಲ್ಲೋದು ಬಿಜೆಪಿಯೇ ಅಂತಾ  ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಅಶ್ವತ್ ನಾರಾಯಣ ತಿಳಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ದೆಹಲಿಗೆ ಹೋಗುತ್ತಿದ್ದ ಸಿದ್ದರಾಮಯ್ಯ ಭಾರೀ ಅನಾಹುತದಿಂದ ಪಾರು

ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಡಿಕೆ ಶಿವಕುಮಾರ್ ದಿಡೀರ್ ದೆಹಲಿಗೆ

ಶಾಲಾ ಭದ್ರತಾ ಸಿಬ್ಬಂದಿ ಮೇಲೆ ಬೀದಿ ನಾಯಿ ಅಟ್ಯಾಕ್: ತಕ್ಷಣವೇ ಅವರು ಮಾಡಿದ್ದೇನು, ಭಯಾನಕ ವಿಡಿಯೋ

ಪಿಂಪ್ರಿ ಚಿಂಚ್ವಡ್ನಲ್ಲಿ ಆಘಾತಕಾರಿ ಘಟನೆ: ಬಟ್ಟೆ ಅಂಗಡಿಯಲ್ಲಿ ಪ್ರೇಯಸಿಗೆ ಯದ್ವಾ ತದ್ವಾ ಹೊಡೆದ ಪ್ರಿಯಕರ Video

ಎಲ್ಲಾ ಇಲ್ಲಿಗೇ ನಿಂತಿಲ್ಲ... ರಾಜೀನಾಮೆ ಬೆನ್ನಲ್ಲೇ ಸಿದ್ದರಾಮಯ್ಯ ಹೇಳಿಕೆ ಗಮನಿಸಲೇಬೇಕು

ಮುಂದಿನ ಸುದ್ದಿ
Show comments