ಬಿಜೆಪಿಗೆ ಅಧಿಕಾರದ ಮದ ನೆತ್ತಿಗೆ ಹತ್ತಿದೆ-ಸಿಎಂ ಇಬ್ರಾಹಿಂ

Webdunia
ಶನಿವಾರ, 12 ನವೆಂಬರ್ 2022 (17:33 IST)
ಮೋದಿಯವರು ರಾಜ್ಯಕ್ಕೆ ಬಂದು ಹೋಗಿದ್ದು ಜೆಡಿಎಸ್ ಗೆ ಲಾಭವಾಗಿದೆ. ಇದೇ ರೀತಿ ಇನ್ನೂ ಎರಡು ಸಲ ರಾಜ್ಯಕ್ಕೆ ಬಂದು ಹೋದರೆ ಜೆಡಿಎಸ್ ಗೆ ಒಳ್ಳೆಯದಾಗಲಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹೇಳಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಅವರು, ದೇವೇಗೌಡರನ್ನು ಕೆಂಪೇಗೌಡರ ಪ್ರತಿಮೆ ಉದ್ಘಾಟನೆಗೆ ಕರೆಯದೇ ಇದ್ದದ್ದು ಕನ್ನಡಿಗರಿಗೆ ಮಾಡಿದ ಅವಮಾನ. ಸಿದ್ದರಾಮಯ್ಯರನ್ನ ಸಹ ಕಾರ್ಯಕ್ರಮಕ್ಕೆ ಕರೆಯಬೇಕಿತ್ತು. ಪ್ರಧಾನಿ ನಾಡು ಕಟ್ಟಲು ರಾಜ್ಯಕ್ಕೆ ಬಂದಿಲ್ಲ, ಬಿಜೆಪಿ ಕಟ್ಟಲು ಬಂದಿದ್ದಾರೆ ಎಂದು ಲೇವಡಿ ಮಾಡಿದ್ರು. ನಿನ್ನೆ ನಡೆದ ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ನಿರ್ಮಲಾನಂದ ಸ್ವಾಮೀಜಿ ಹೆಗಲ ಮೇಲೆ ಕೈಹಾಕಿ ಸಚಿವ ಅಶೋಕ್ ಘೋರ ಅಪಮಾನ ಮಾಡಿದ್ದಾರೆ. ಈ ಹಿಂದೆ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಕೂಡ ಸ್ವಾಮೀಜಿ ಮುಂದೆ ಕಾಲು ಮೇಲೆ ಕಾಲು ಹಾಕಿ ಕುಳಿತಿದ್ದರು. ಬಿಜೆಪಿಯವರಿಗೆ ಅಧಿಕಾರದ ಮದ ನೆತ್ತಿಗೆ ಹತ್ತಿದೆ. ಯಾರಿಗೆ ಯಾವ ರೀತಿ ಗೌರವ ಕೊಡಬೇಕು ಅನ್ನೋದನ್ನ ಬಿಜೆಪಿಯವರು ಮರೆತಿದ್ದಾರೆ ಎಂದು ಕಿಡಿಕಾರಿದ್ರು. ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರೋದು ಶತಸಿದ್ದ ಎಂದು ವಿಶ್ವಾಸ ವ್ಯಕ್ತಪಡಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರೈವೆಸಿಗೆ ಅಡ್ಡಿಯಾಗುತ್ತಾಳೆಂದು ಮಗಳನ್ನು ಮುಗಿಸಿದ ಮಲತಂದೆ ಕೊನೆಗೂ ಅರೆಸ್ಟ್‌

ಹಂಪಿಯಿಂದ ನಾಪತ್ತೆಯಾಗಿದ್ದ ಯುವಕ ಕೊನೆಗೂ ಪತ್ತೆ, ಎಲ್ಲಿ ಗೊತ್ತಾ

ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮಹದೇವಪ್ಪರನ್ನು ಭೇಟಿಯಾಗಿ ನವೆಂಬರ್ ಕ್ರಾಂತಿ ಬಗ್ಗೆ ಪರಮೇಶ್ವರ್ ಸ್ಫೋಟಕ ಹೇಳಿಕೆ

Rain Alert, ದೇಶದ ಈ ಭಾಗಕ್ಕೆ ಚಂಡಮಾರುತ ಅಪ್ಪಳಿಸುವ ಮುನ್ಸೂಚನೆ

ಮುಂದಿನ ಸುದ್ದಿ
Show comments