Select Your Language

Notifications

webdunia
webdunia
webdunia
webdunia

ಜನಸ್ಪಂದನ ಹೆಸರಲ್ಲಿ ಸಮಾವೇಶ ನಡೆಸಲು ಮುಂದಾದ ಬಿಜೆಪಿ

ಜನಸ್ಪಂದನ ಹೆಸರಲ್ಲಿ ಸಮಾವೇಶ ನಡೆಸಲು ಮುಂದಾದ ಬಿಜೆಪಿ
ಚಿಕ್ಕಬಳ್ಳಾಪುರ , ಗುರುವಾರ, 8 ಸೆಪ್ಟಂಬರ್ 2022 (09:03 IST)
ಚಿಕ್ಕಬಳ್ಳಾಪುರ : ದೊಡ್ಡಬಳ್ಳಾಪುರದಲ್ಲಿ ಆಯೋಜಿಸಲಾಗಿದ್ದ ಬಿಜೆಪಿ ಜನೋತ್ಸವ ಕಾರ್ಯಕ್ರಮದ ಹೆಸರು ಬದಲಾವಣೆ ಮಾಡಿ ಜನಸ್ಪಂದನ ಹೆಸರಲ್ಲಿ ಸೆಪ್ಟೆಂಬರ್ 10 ಶನಿವಾರ ಸಮಾವೇಶ ನಡೆಸಲು ಬಿಜೆಪಿ ಮುಂದಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದಲ್ಲಿ ನಾಳೆ ಜನೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಆ ಬಳಿಕ ಸಚಿವರಾಗಿದ್ದ ಉಮೇಶ್ ಕತ್ತಿ ನಿಧನರಾಗಿದ್ದರಿಂದಾಗಿ ಜನೋತ್ಸವ ಕಾರ್ಯಕ್ರಮವನ್ನು ಸೆಪ್ಟೆಂಬರ್ 11 ಭಾನುವಾರ ನಡೆಸಲು ತೀರ್ಮಾನಿಸಿತ್ತು.

ಇದೀಗ ಈ ಕಾರ್ಯಕ್ರಮಕ್ಕೆ ಜನೋತ್ಸವ ಬದಲಾಗಿ ಜನಸ್ಪಂದನ ಸಮಾವೇಶ ಎಂದು ಮರುನಾಮಕರಣ ಮಾಡಿ ಸೆಪ್ಟೆಂಬರ್ 10 ಶನಿವಾರ ನಡೆಸಲು ತೀರ್ಮಾನಿಸಿದೆ. 

ಉಮೇಶ್ ಕತ್ತಿ ನಿಧನದ ನಡುವೆಯೂ ನಾಳೆ ಜನೋತ್ಸವ ಬೇಡ ಎಂಬ ಅಭಿಪ್ರಾಯವನ್ನು ಹಲವು ಬಿಜೆಪಿ ನಾಯಕರು ವ್ಯಕ್ತಪಡಿಸಿದ್ದರು ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿತ್ತು. ಹಾಗಾಗಿ ನಾಳೆ ನಡೆಯಬೇಕಾಗಿದ್ದ ಜನೋತ್ಸವ ಕಾರ್ಯಕ್ರಮವನ್ನು ಜನಸ್ಪಂದನ ಕಾರ್ಯಕ್ರಮವೆಂದು ಮರುನಾಮಕರಣ ಮಾಡಿ ಸೆಪ್ಟೆಂಬರ್ 10 ಶನಿವಾರ ನಡೆಸಲು ಸರ್ಕಾರ ತೀರ್ಮಾನಿಸಿದೆ.

 

Share this Story:

Follow Webdunia kannada

ಮುಂದಿನ ಸುದ್ದಿ

ಇನ್ಮುಂದೆ ಏರ್‌ಬ್ಯಾಗ್ ಕಡ್ಡಾಯ : ನಿತಿನ್ ಗಡ್ಕರಿ