ರಾಜ್ಯದಲ್ಲಿ ಕೋಮುಗಲಭೆ ಸೃಷ್ಟಿಸಲು ಬಿಜೆಪಿ ಸಂಚು : ಸಿಎಂ ಆರೋಪ

Webdunia
ಶುಕ್ರವಾರ, 15 ಸೆಪ್ಟಂಬರ್ 2017 (17:03 IST)
ಪಾರದರ್ಶಕತೆ ಮತ್ತು ದಕ್ಷತೆಯಿಂದ ಕಾರ್ಯನಿರ್ವಹಿಸುತ್ತಿರುವ ಕಾಂಗ್ರೆಸ್ ಸರಕಾರವನ್ನು ಟೀಕಿಸಲು ಯಾವುದೇ ಚುನಾವಣೆ ವಿಷಯಗಳಿಲ್ಲವಾದ್ದರಿಂದ, ಕೋಮುಗಲಭೆಯನ್ನು ಸೃಷ್ಟಿಸಿ ಜಯಗಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಜಿಲ್ಲೆಯ ಸುಳೇಬಾವಿ ಗ್ರಾಮದಲ್ಲಿ ಆಯೋಜಿಸಲಾದ ಪಕ್ಷದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಜೆಪಿಯವರಿಗೆ ಮುಂಬರುವ ಚುನಾವಣೆಯಲ್ಲಿ ಜಯ ದೊರೆಯುವುದಿಲ್ಲ ಎನ್ನುವುದು ಖಾತರಿಯಾಗಿದೆ ಎಂದು ತಿಳಿಸಿದ್ದಾರೆ. 
 
ಭ್ರಮನಿರಸನಗೊಂಡಿರುವ ಬಿಜೆಪಿ ನಾಯಕರು ಸಮುದಾಯಗಳಲ್ಲಿ ಒಡಕು ಮೂಡಿಸಿ ಹಿಂಸಾಚಾರವೆಬ್ಬಿಸುವ ಹುನ್ನಾರ ನಡೆಸಿದ್ದಾರೆ ಎಂದು ಟೀಕಿಸಿದ್ದಾರೆ. ಆದರೆ, ಸರಕಾರ ವಿಚ್ಚಿದ್ರಕಾರಿ ಶಕ್ತಿಗಳನ್ನು ಸದೆಬಡೆಯುವ ಸಾಮರ್ಥ ಹೊಂದಿದೆ ಎಂದು ಗುಡುಗಿದ್ದಾರೆ.
 
ಒಂದು ಕಡೆ, ರಾಜ್ಯದಲ್ಲಿರುವ ಕಾಂಗ್ರೆಸ್ ಸರಕಾರ ಭ್ರಷ್ಟಾಚಾರ ಮುಕ್ತ ಮತ್ತು ಪಾರದರ್ಶಕತೆಯಿಂದ ಕಾರ್ಯನಿರ್ವಹಿಸುತ್ತಿದ್ದರೆ, ಮತ್ತೊಂದೆಡೆ ಪ್ರಧಾನಿ ಮೋದಿ ಜನತೆಗೆ ನೀಡಿದ ಅಶ್ವಾಸನೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದ್ದಾರೆ ಎಂದು ತಿರುಗೇಟು ನೀಡಿದರು.
 
ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿ ಬಾರಿಸಿ ಮತ್ತೆ ಅಧಿಕಾರಕ್ಕೆ ಬರುವುದು ಖಚಿತ. ಬಿಜೆಪಿ ಗಂಟುಮೂಟೆ ಕಟ್ಟಿಕೊಂಡು ಹೊರಹೋಗುವುದು ಖಾತರಿಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಎಂದು ಭವಿಷ್ಯ ನುಡಿದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕಳ್ಳತನದ ಬೆನ್ನಲ್ಲೇ ರೈಲಿನಿಂದ ಕೆಳಗೆ ಬಿದ್ದ ಮೊಬೈಲ್ ಕಳ್ಳ: Shocking video

ತಿಂಡಿ ಖರೀದಿಸುತ್ತಿದ್ದವಳು ಕ್ಷಣಾರ್ಧದಲ್ಲಿ ಸಾವು: ಸಣ್ಣ ತಪ್ಪಿನಿಂದ ರೈಲಿನಡಿಗೆ ಸಿಲುಕಿ ಪೀಸ್ ಪೀಸ್ Video

ದೆಹಲಿಯ ಜಂತರ್ ಮಂಥರ್ ನಲ್ಲಿ ಜಿರಳೆ ಪಾರ್ಟಿ ಸದಸ್ಯರ ಮೇಲೆ ಲಾಠಿ ಚಾರ್ಜ್: ದಿಕ್ಕಾಪಾಲಾಗಿ ಓಡಿದ ಸಿಜೆಪಿ ಸದಸ್ಯರು Video

ಶಾಲೆಗೆ ವಿದ್ಯಾರ್ಥಿ ಹನುಮಾನ್ ಚಾಲೀಸಾ ತಂದಿದ್ದಕ್ಕೆ ಬಿಸಾಕಿದ ಶಿಕ್ಷಕಿ: ಮುಂದೇನಾಯ್ತು ನೋಡಿ Video

ಮುಂದಿನ ಸುದ್ದಿ
Show comments