Webdunia - Bharat's app for daily news and videos

Install App

ಬಿಜೆಪಿಗೆ ಅಲ್ಪಸಂಖ್ಯಾತರು, ದಲಿತರನ್ನು ಮಟ್ಟಹಾಕುವುದೇ ಟಾರ್ಗೆಟ್: ಸಿಎಂ ಸಿದ್ದರಾಮಯ್ಯ

Webdunia
ಶನಿವಾರ, 23 ಜುಲೈ 2016 (15:02 IST)
ದೇಶದಲ್ಲಿ ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಅಲ್ಪ ಸಂಖ್ಯಾತರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ. ಬಿಜೆಪಿಯವರದ್ದು ಎರಡು ಹಿಡನ್ ಅಜೆಂಡಾಗಳಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.
 
ಒಂದನೇ ಹಿಡನ್ ಅಜೆಂಡಾ ಎಂದರೆ ಬಹಿರಂಗವಾಗಿ ಅಲ್ಪಸಂಖ್ಯಾತರನ್ನು ಮಟ್ಟಹಾಕುವುದು ಎರಡನೇ ಹಿಡನ್ ಅಜೆಂಡಾ ಅಂದರೆ, ದಲಿತರನ್ನು ಒಳಗಿಂದೊಳಗೆ ಮಟ್ಟಹಾಕುವುದು. ಎರಡು ಟಾರ್ಗೆಟ್‌ಗಳನ್ನು ಇಟ್ಟುಕೊಂಡು ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. 
 
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋ ಮಾಂಸ ಆರೋಪದಡಿ ಗುಜರಾತ್ ದಲಿತ ಯುವಕರ ಮೇಲಿನ ಹಲ್ಲೆಯ ಘಟನೆ ಅಮಾನವೀಯ. ಮೋದಿ ಪ್ರಧಾನಿಯಾದ ಬಳಿಕ ಅಲ್ಪ ಸಂಖ್ಯಾತರ ಮೇಲೆ ಬಹಿರಂಗವಾಗಿ ದೌರ್ಜನ್ಯ ನಡೆಯುತ್ತಿದೆ ಎಂದು ಕೇಂದ್ರ ಸರಕಾರದ ವಿರುದ್ಧ ಗುಡುಗಿದರು.
 
ಗುಜರಾತ್ ದಲಿತ ಯುವಕರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ದಲಿತ ಯುವಕರು ಗೋವ ನ್ನು ಕೊಂದಿಲ್ಲ. ಬದಲಾಗಿ ಸತ್ತಿರುವ ಗೋ ಚರ್ಮಯನ್ನು ಮಾರಾಟ ಮಾಡಿ ತಮ್ಮ ಬದುಕು ಸಾಗಿಸುತ್ತಿರುವವರು ಅವರ ಮೇಲಿನ ಹಲ್ಲೆ ಖಂಡನೀಯ ಎಂದು ತಿಳಿಸಿದರು.
 
ಬಹಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಜಿ ಮುಖ್ಯಮಂತ್ರಿ ಮಾಯಾವತಿ ಅವರನ್ನು ವೇಶ್ಯೆಗೆ ಹೊಲಿಸಿರುವ ಬಿಜೆಪಿ ಉಪಾಧ್ಯಕ್ಷ ದಯಾಶಂಕರ್ ಸಿಂಗ್ ಅವರ ಹೇಳಿಕೆಯನ್ನು ಖಂಡಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments