ಪದಾಧಿಕಾರಿಗಳ ನೇಮಕ ಕುರಿತಂತೆ ರಾಜ್ಯ ಬಿಜೆಪಿಯಲ್ಲಿ ಎದ್ದಿರುವ ಅಪಸ್ವರದಿಂದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧ ವರಿಷ್ಠರು ಅಸಮಾದಾನಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ರಾಜ್ಯದಲ್ಲಿ ಪದಾಧಿಕಾರಿ ನೇಮಕಾತಿ ವಿದ್ಯಮಾನಗಳು ಕುರಿತು ಹೈಕಮಾಂಡ್ ಯಡಿಯೂರಪ್ಪ ವಿರುದ್ಧ ಬೇಸರ ವ್ಯಕ್ತಪಡಿಸಿದೆ ಎಂದು ಕೆಲ ಅನಾಮಧೇಯ ನಾಯಕರು ತಿಳಿಸಿದ್ದಾರೆ.
ಕೆ.ಎಸ್. ಈಶ್ವರಪ್ಪ ನಿವಾಸದಲ್ಲಿ ಸಭೆ ಸೇರಿದ ಕೆಲ ಬಿಜೆಪಿ ನಾಯಕರು ನಾಳೆ ಯಡಿಯೂರಪ್ಪ ಕರೆದಿರುವ ಸಭೆಗೆ ಹಾಜರಾಗಬೇಕೋ ಅಥವಾ ಬೇಡವೋ ಎನ್ನುವ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ.
ವಿಧಾನಸಭೆಯ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಮಾತನಾಡಿ, ಈಶ್ವರಪ್ಪ ನಿವಾಸದಲ್ಲಿ ನಡೆಯುತ್ತಿರುವ ಸಭೆಯ ಬಗ್ಗೆ ಮಾಹಿತಿಯಿಲ್ಲ. ಆದರೆ, ನಾಳೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಕರೆದಿರುವ ಸಭೆಗೆ ಹಾಜರಾಗುವುದಾಗಿ ತಿಳಿಸಿದ್ದಾರೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.