Select Your Language

Notifications

webdunia
webdunia
webdunia
webdunia

ರಾಜ್ಯ ಬಿಜೆಪಿ ಕಾರ್ಯಕ್ರಮಗಳಿಗೆ ಹೈಕಮಾಂಡ್ ಮೆಚ್ಚುಗೆ: ಮಾಜಿ ಸುರೇಶ್ ಕುಮಾರ್

ರಾಜ್ಯ ಬಿಜೆಪಿ ಕಾರ್ಯಕ್ರಮಗಳಿಗೆ ಹೈಕಮಾಂಡ್ ಮೆಚ್ಚುಗೆ: ಮಾಜಿ ಸುರೇಶ್ ಕುಮಾರ್
ಬೆಂಗಳೂರು , ಶನಿವಾರ, 2 ಜುಲೈ 2016 (16:51 IST)
ಇಂದು ನಡೆದ ಬಿಜೆಪಿ ಪದಾಧಿಕಾರಿಗಳ ಸಭೆಗೆ 166 ಪದಾಧಿಕಾರಿಗಳು ಆಹ್ವಾನಿತರಾಗಿದ್ದು ಅದರಲ್ಲಿ 144 ಪದಾಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು. ಕೇವಲ 22 ಪದಾಧಿಕಾರಿಗಳು ಗೈರುಹಾಜರಾಗಿದ್ದಾರೆ ಎಂದು ಮಾಜಿ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
 
ಇಂದು ನಡೆದ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದ ಸಂಘಟನೆ ಕುರಿತಂತೆ ಪರಿಶೀಲನೆ ನಡೆಸಲಾಗಿದ್ದು, ಬೂತಮಟ್ಟದ ಸ್ಥಾನೀಯ ಮಟ್ಟದ ಸಂಘಟನೆ ಬಗ್ಗೆ ಪರಿಶೀಲನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
 
ರಾಜ್ಯದ 30 ಜಿಲ್ಲೆಗಳಲ್ಲಿ 25 ಜಿಲ್ಲೆಗಳ ಜಿಲ್ಲಾಧ್ಯಕ್ಷರು ಅಧಿಕಾರ ಸ್ವೀಕರಿಸಿದ್ದಾರೆ. ಇತರ ಐದು ಜಿಲ್ಲೆಗಳ ಜಿಲ್ಲಾಧ್ಯಕ್ಷರು ಕೂಡಲೇ ಅಧಿಕಾರ ಸ್ವೀಕಾರ ಮಾಡಿ ಕಾರ್ಯಕಾರಿಣಿ ಸಭೆಯನ್ನು ಮುಗಿಸುವಂತೆ ಸೂಚನೆ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
 
ಯೋಗದಿನ, ಶ್ಯಾಮ್‌ಪ್ರಸಾದ್ ಸ್ಮರಣೆ ಮತ್ತು ತುರ್ತುಪರಿಸ್ಥಿತಿಯ ಕರಾಳ ದಿನಗಳನ್ನು ಆಚರಣೆ ಮಾಡಿದ್ದೇವೆ. ರಾಜ್ಯದಲ್ಲಿ ಬಿಜೆಪಿ ಆಚರಿಸುತ್ತಿರುವ ಪ್ರತಿಯೊಂದು ಕಾರ್ಯಕ್ರಮಗಳಿಗೆ ಬಿಜೆಪಿ ಹೈಕಮಂಡ್ ಮೆಚ್ಚುಗೆ ಸೂಚಿಸಿದೆ ಎಂದು ಮಾಜಿ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಮಿಸೈಲ್ ಗುಂಪಿಗೆ ಭಾರತ ಸೇರ್ಪಡೆಯಿಂದ ಚೀನಾ ಕಳವಳ: ತಜ್ಞರು