ಬಿಜೆಪಿ ಪಾದಯಾತ್ರೆ ಎರಡನೇ ದಿನಕ್ಕೆ…

Webdunia
ಶುಕ್ರವಾರ, 27 ಜುಲೈ 2018 (15:10 IST)
ರೈತರ ಸಂಪೂರ್ಣ ಸಾಲಮನ್ನಕ್ಕೆ ಆಗ್ರಹಿಸಿ ರಾಮನಗರ ಜಿಲ್ಲಾ ಬಿಜೆಪಿ ವತಿಯಿಂದ ಬೆಂಗಳೂರಿನ ವಿಧಾನ ಸೌಧದ ವರೆಗೆ ಹಮ್ಮಿಕೊಂಡಿದ್ದ ಪಾದಯಾತ್ರೆ ಎರಡನೇ ದಿನಕ್ಕೆ ಕಾಲಿಟ್ಟಿದೆ.  

ಚನ್ನಪಟ್ಟಣದ ಕೆಂಗಲ್ ಆಂಜನೇಯ ದೇವಾಲಯದಿಂದ ಹೊರಟಿದ್ದ ಪಾದಯಾತ್ರಿಗಳು ಸಂಜೆ ಬಿಡದಿಯ ಮಂಜುನಾಥ ಕಲ್ಯಾಣ ಮಂಟಪದಲ್ಲಿ ತಂಗಿದ್ದು,   ಬಿಡದಿಯ ಬಾಲಗಾಂಗಧರನಾಥಸ್ವಾಮಿ ಪುತ್ತಳಿಗೆ ಮಾಲರ್ಪಣೆ ಮಾಡಿ,  ತಮ್ಮ ಎರಡನೇ ದಿನದ ಪಾದಯಾತ್ರೆ ಆರಂಭಿಸಿದ್ರು. ರಾಮನಗರ ಜಿಲ್ಲಾ ಬಿಜೆಪಿ ಅಧ್ಯಕ್ಷ ರುದ್ರೇಶ್,   ಬಿಜೆಪಿ ಮುಖಂಡ ಕೆ.ಶಿವರಾಮ್ ನೇತೃತ್ವದಲ್ಲಿ ನೂರಾರು ಮಂದಿ ಬಿಜೆಪಿ ಕಾರ್ಯಕರ್ತರು ಹಾಗೂ ರೈತ ಮಹಿಳೆಯರು ಬೆಂಗಳೂರಿನತ್ತ ಪಾದಯಾತ್ರೆ ಆರಂಭಿಸಿದ್ರು.

ವೇಳೆ ಮಾತನಾಡಿದ ರುದ್ರೇಶ್,  ಹೆಚ್.ಡಿ.ಕುಮಾರಸ್ವಾಮಿ ಅವ್ರು ನಮ್ಮ ಪಾದಯಾತ್ರೆಯನ್ನ ವ್ಯಂಗ್ಯ ಮಾಡಿದ್ದಾರೆ ಅದು ಯಾವ ಅರ್ಥದಲ್ಲಿ ಮಾಡಿದ್ದಾರೆ ನನಗೆ ಗೊತ್ತಿಲ್ಲಾ. ಬಿಜೆಪಿ ಪಕ್ಷ ರಾಜ್ಯದ ಎಲ್ಲಾ ರೈತರ ಸಾಲಮನ್ನಾ ಮಾಡಿ ಅಂತಾ ಕೇಳಿಕೊಂಡಿರಲಿಲ್ಲಾ. ಸ್ವತಃ ಅವರೇ ಘೋಷಣೆ ಮಾಡಿಕೊಂಡಿದ್ರು. ಹಾಗಾಗೀ ಅವರು ನುಡಿದಂತೆ ನಡೆದುಕೊಳ್ಳಲಿ ಅಂತಾ ನಾವು ಪಾದಯಾತ್ರೆ ನಡೆಸುತ್ತಿದ್ದೇವೆ ಎಂದಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ನೆರಡು ತಿಂಗಳು ಬೇಕಾಗುವಷ್ಟು ಕಚ್ಚಾತೈಲವಿದೆ: ಸರ್ಕಾರ

ಆಸ್ಪತ್ರೆಯಲ್ಲಿ ಸೋನಿಯಾ ಗಾಂಧಿ: ಆರೋಗ್ಯ ವಿಚಾರಿಸಿದ ಮೋದಿ ಫೋಟೋ ಹಿಂದಿನ ಅಸಲಿಯತ್ತೇನು

ಅಹಿಂದ ಹೆಸರು ಹೇಳಿಕೊಂಡು ಅಧಿಕಾರಕ್ಕೆ ಬಂದು ಅವರಿಗೇ ಅನ್ಯಾಯ ಮಾಡ್ತಿರುವ ಕಾಂಗ್ರೆಸ್: ಸುನಿಲ್ ಕುಮಾರ್

ಅಸ್ಸಾಂನಲ್ಲಿ ಮಾಫಿಯಾ ಆಡಳಿತ: ಪ್ರಿಯಾಂಕಾ ಗಾಂಧಿ

ಹಣ್ಣು ನೀಡಿ ಹಸಿವು ನೀಗಿಸುತ್ತಿದ್ದ ಅಜ್ಜಿ ಇನ್ನಿಲ್ಲ ಎಂದಾಗ ಕೋತಿ ನಡೆಸಿಕೊಂಡ ರೀತಿಗೆ ಕಣ್ಣೀರು ಬರುತ್ತೆ

ಮುಂದಿನ ಸುದ್ದಿ
Show comments