Webdunia - Bharat's app for daily news and videos

Install App

ಸಾಸಲಾಪುರದಲ್ಲಿ ಬಿಜೆಪಿ ನಾಯಕರ ಬರ ಅಧ್ಯಯನ

ಕೃಷ್ಣವೇಣಿ ಕೆ
ಬುಧವಾರ, 29 ಜುಲೈ 2026 (17:02 IST)
ಕನಕಪುರ: ಕನಕಪುರ ತಾಲೂಕಿನ ಸಾಸಲಾಪುರ ಗ್ರಾಮದಲ್ಲಿ ಇಂದು ವಿಧಾನ ಪರಿಷತ್ ಹಾಗೂ ವಿಧಾನಸಭೆಯ ಜನಪ್ರತಿನಿಧಿಗಳು ಮತ್ತು ಬಿಜೆಪಿ ಪ್ರಮುಖರ ತಂಡವು ಪ್ರವಾಸ ಕೈಗೊಂಡು, ಬರಪೀಡಿತ ಪ್ರದೇಶದ ರೈತರೊಂದಿಗೆ ನೇರ ಸಂವಾದ ನಡೆಸಿತು. ಸಾಸಲಾಪುರ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಎದುರಾಗಿರುವ ತೀವ್ರ ನೀರಾವರಿ ಅಭಾವ ಹಾಗೂ ಬೆಳೆ ಹಾನಿಯ ಕುರಿತು ನಾಯಕರು ವಿವರವಾದ ಅಧ್ಯಯನ ನಡೆಸಿದರು.
 
 
ಅಂತರ್ಜಲ ಮಟ್ಟ ಕುಸಿದ ಪರಿಣಾಮ ಬೋರ್‍ವೆಲ್‍ಗಳು ಬತ್ತಿ ಹೋಗಿದ್ದು, ಕೃಷಿಗೆ ಹಾಗೂ ಜಾನುವಾರುಗಳಿಗೆ ನೀರಿನ ತೀವ್ರ ಅಭಾವ ಎದುರಾಗಿದೆ. ಮಳೆ ಇಲ್ಲದೆ ಒಣಗಿದ ಬೆಳೆಗಳಿಗೆ ಸೂಕ್ತ ಪರಿಹಾರ ಧನ ತಕ್ಷಣ ಬಿಡುಗಡೆಯಾಗಬೇಕು ಎಂದು ರೈತರು ಮನವಿ ಮಾಡಿದರು ಹಾಗೂ ಬರಪೀಡಿತ ಅವಧಿಯಲ್ಲಿ ರೈತರ ಮೇಲಿರುವ ಸಾಲ ಮರುಪಾವತಿಯ ಒತ್ತಡವನ್ನು ಕಡಿಮೆ ಮಾಡಲು ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಯಿತು.
 
ಈ ಬರ ಅಧ್ಯಯನ ಹಾಗೂ ಸಮಾಲೋಚನಾ ಸಭೆಯಲ್ಲಿ ಪ್ರಮುಖ ಜನಪ್ರತಿನಿಧಿಗಳು ಹಾಗೂ ಪಕ್ಷದ ಮುಖಂಡರಾದ ವಿಧಾನಪರಿಷತ್ ವಿಪಕ್ಷ ನಾಯಕ ಚಲವಾದಿ ನಾರಾಯಣ ಸ್ವಾಮಿ, ವಿಧಾನ ಪರಿಷತ್ ಸದಸ್ಯ ಹೆಚ್.ಎಸ್. ಗೋಪಿನಾಥ್, ಮಾಜಿ ಸಚಿವ ಮಹೇಶ್ ಶಾಸಕ ಶ್ರೀವತ್ಸ, ರಾಮನಗರ ಬಿಜೆಪಿ ಮುಖಂಡ ಫಣೀಶ್, ರಾಮನಗರ ಬಿಜೆಪಿ ಜಿಲ್ಲಾಧ್ಯಕ್ಷ ಆನಂದಸ್ವಾಮಿ, ರೈತ ಮುಖಂಡರು ಇದ್ದರು.
 
ರೈತರ ಅಳಲನ್ನು ಆಲಿಸಿದ ಜನಪ್ರತಿನಿಧಿಗಳು, "ರೈತರ ಈ ಕಷ್ಟದ ಸಮಯದಲ್ಲಿ ನಾವು ಅವರ ಬೆನ್ನಿಗೆ ನಿಲ್ಲಲಿದ್ದೇವೆ. ಸಾಸಲಾಪುರ ಸೇರಿದಂತೆ ಕನಕಪುರ ತಾಲೂಕಿನ ಬರ ಪರಿಸ್ಥಿತಿಯ ನೈಜ ವರದಿಯನ್ನು ಸರ್ಕಾರದ ಗಮನಕ್ಕೆ ತಂದು, ತಕ್ಷಣದ ಬರವರಿ ಪರಿಹಾರ ಕಾರ್ಯಕ್ರಮಗಳು ಹಾಗೂ ಕೃಷಿಕರಿಗೆ ಗರಿಷ್ಠ ನೆರವು ತಲುಪಿಸಲು ಶ್ರಮಿಸಲಾಗುವುದು" ಎಂದು ಭರವಸೆ ನೀಡಿದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಂತಿಯುತ ಪ್ರತಿಭಟನೆ ನಮ್ಮ ಹಕ್ಕು: ರಾಹುಲ್ ಗಾಂಧಿ

ಮಾಜಿ ಗ್ರಾ.ಪಂ ಅಧ್ಯಕ್ಷ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ

ರಾಜಗಢ ಭಾರೀ, ಪ್ರವಾಹಕ್ಕೆ ಕೊಚ್ಚಿ ಹೋದ 11ಪ್ರಯಾಣಿಕರಿದ್ದ ವ್ಯಾನ್, 9ಮಂದಿ ಸಾವು

ಸದನ ಸುಗಮವಾಗಿ ನಡೆಯದಿರಲು ಕಾರಣ ಪ್ರಧಾನಿ ಮೋದಿ, ಅಮಿತ್ ಶಾ ಕಾರಣ

ಮಂಗಳೂರಿನ ಈ ಪ್ರದೇಶದಲ್ಲಿ ಹಾರಾಡಲಿದೆ ಅತ್ಯಂತ ಎತ್ತರದ ರಾಷ್ಟ್ರಧ್ವಜ

ಮುಂದಿನ ಸುದ್ದಿ
Show comments