Select Your Language

Notifications

webdunia
webdunia
webdunia
webdunia

ಐಟಿ ದಾಳಿ ಹಿಂದೆ ಬಿಜೆಪಿ ಕುಮ್ಮಕ್ಕು: ಸಿಎಂ ಸಿದ್ಧರಾಮಯ್ಯ

ಐಟಿ ದಾಳಿ ಹಿಂದೆ ಬಿಜೆಪಿ ಕುಮ್ಮಕ್ಕು: ಸಿಎಂ ಸಿದ್ಧರಾಮಯ್ಯ
Bangalore , ಶನಿವಾರ, 18 ಮಾರ್ಚ್ 2017 (10:20 IST)
ಬೆಂಗಳೂರು:  ರಾಜ್ಯದ ಕಾಂಗ್ರೆಸ್ ಸಚಿವರು ಮತ್ತು ಶಾಸಕರ ಮನೆ ಮೇಲೆ ಐಟಿ ದಾಳಿ ನಡೆಯುತ್ತಿರುವುದಕ್ಕೆ ಬಿಜೆಪಿ ಕುಮ್ಮಕ್ಕು ಕಾರಣ ಎಂದು ಸಿಎಂ ಸಿದ್ಧರಾಮಯ್ಯ ಆರೋಪಿಸಿದ್ದಾರೆ.

 

ಈಗಾಗಲೇ ಹಲವು ಕಾಂಗ್ರೆಸ್ ಶಾಸಕರು ಐಟಿ ದಾಳಿಗೊಳಗಾಗಿದ್ದಾರೆ. ಇದಲ್ಲದೆ, ಇನ್ನೂ ಹಲವು ಶಾಸಕರ ಮನೆ ಮೇಲೆ ಐಟಿ ದಾಳಿ ನಡೆಸಲು ಯೋಜನೆ ರೂಪಿಸುತ್ತಿದೆ ಎಂಬ ಸುದ್ದಿ ಹಬ್ಬಿದೆ. ಈ ಹಿನ್ನಲೆಯಲ್ಲಿ ಅವರು ಈ ರೀತಿ ಪ್ರತಿಕ್ರಿಯಿಸಿದ್ದಾರೆ.

 
ಕೇಂದ್ರ ಸರ್ಕಾರದ ಕುಮ್ಮಕ್ಕಿನಿಂದ ಕಾಂಗ್ರೆಸ್ ಶಾಸಕರ ಮನೆ ಮೇಲೆ ದಾಳಿ ನಡೆಯುತ್ತಿದೆ. ಕಾಂಗ್ರೆಸ್ ಶಾಸಕರನ್ನು ಭ್ರಷ್ಟರು ಎಂದು ತೋರಿಸಿಕೊಡಲು ಈ ರೀತಿ ಯೋಜನೆ ರೂಪಿಸಿ ದಾಳಿ ನಡೆಸುತ್ತಿದ್ದಾರೆ. ಇದು ಸಂಪೂರ್ಣ ರಾಜಕೀಯ ಪ್ರೇರಿತ ಎಂದು ಸಿಎಂ ಆರೋಪ ಮಾಡಿದ್ದಾರೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

Share this Story:

Follow Webdunia kannada

ಮುಂದಿನ ಸುದ್ದಿ

2019 ರ ಚುನಾವಣೆಗೆ ಯುಪಿಎ ಪ್ರಧಾನಿ ಅಭ್ಯರ್ಥಿ ಯಾರು ಗೊತ್ತಾ?!