Select Your Language

Notifications

webdunia
webdunia
webdunia
webdunia

ಸದನದಲ್ಲಿ ಹೋರಾಟಕ್ಕೆ ಬಿಜೆಪಿ ಸಜ್ಜಾಗಿದೆ

ಸದನದಲ್ಲಿ ಹೋರಾಟಕ್ಕೆ ಬಿಜೆಪಿ ಸಜ್ಜಾಗಿದೆ
ದಾವಣಗೆರೆ , ಗುರುವಾರ, 30 ನವೆಂಬರ್ 2023 (15:44 IST)
ಸದನದಲ್ಲಿ ಹೋರಾಟಕ್ಕೆ ಬಿಜೆಪಿ ಸಜ್ಜಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಭೀಕರ ಬರಗಾಲ ಇದೆ, ಕಬ್ಬಿನ ಬೆಳೆಗಾರರ ಕೂಗಿಗೆ ಈ ರಾಜ್ಯ ಸರ್ಕಾರ ಕಿವಿ ಕೊಡ್ತಿಲ್ಲ.ಅದೇ ರೀತಿ ಉತ್ತರ ಕರ್ನಾಟಕದ‌ ಅಭಿವೃದ್ಧಿ ಬಗ್ಗೆ ಮರೆತಿದೆ. ಶಾಸಕರಿಗೆ ಬಿಡುಗಡೆ ಆಗ್ಬೇಕಾಗಿದ್ದ ಅನುದಾನ ಕೂಡ ಬಿಡುಗಡೆಯಾಗಿಲ್ಲ. ಇಲ್ಲಿ ತನಕ ಶಾಸಕರಿಗೆ ಒಂದು ರೂಪಾಯಿ ಅನುದಾನವನ್ನು ಈ ಸರ್ಕಾರ ಬಿಡುಗಡೆ ಮಾಡಿಲ್ಲ,

ಈ ಸರ್ಕಾರ ರೈತ ವಿರೋಧಿ, ಬಡವಿರೋಧಿ ಸರ್ಕಾರ.. ಇನ್ನು ಕಾಂತರಾಜ್ ವರದಿಯಲ್ಲಿ ಈ ಸರ್ಕಾರ ಹೇಗೆ ನಡೆದುಕೊಳ್ಳುತ್ತಿದೆ ಎಂಬುದು ಕಾಣ್ತಿದೆ. ಈ ಎಲ್ಲಾ ವಿಚಾರಗಳನ್ನು ಮುಂದಿಟ್ಟುಕೊಂಡು ಈ ಸರ್ಕಾರವನ್ನು ಅಧಿವೇಶನದಲ್ಲಿ ಕಟ್ಟಿಹಾಕುತ್ತೇವೆ. ಅಧಿವೇಶನದಲ್ಲಿ ಸರ್ಕಾರದ ಸೊಕ್ಕು ಮುರಿಯುವ ಕೆಲಸ ಮಾಡುತ್ತೇವೆ. ಜಾತಿಗಣತಿ ಸೇರಿ ಸಾಕಷ್ಟು ವಿಚಾರಗಳನ್ನು ಮುಂದಿಟ್ಟುಕೊಂಡು ಅಧಿವೇಶನದಲ್ಲಿ ಚರ್ಚಿಸುತ್ತೇವೆ ಎಂದ್ರು.

Share this Story:

Follow Webdunia kannada

ಮುಂದಿನ ಸುದ್ದಿ

ಜಮೀರ್​ ಅಹ್ಮದ್​ ಖಾನ್​​ ಒಬ್ಬ ಹುಚ್ಚ - MPR