Webdunia - Bharat's app for daily news and videos

Install App

ಬಿಜೆಪಿಯವರಿಗೆ ಸುಳ್ಳು ಹೇಳುವುದೇ ಕಸುಬಾಗಿದೆ: ಸಚಿವ ಜಾರ್ಜ್

Webdunia
ಸೋಮವಾರ, 28 ಆಗಸ್ಟ್ 2017 (13:13 IST)
ಬಿಜೆಪಿಯವರಿಗೆ ಸುಳ್ಳು ಹೇಳುವುದೇ ಕಸುಬಾಗಿದೆ. ಸುಳ್ಳು ಆರೋಪಗಳನ್ನು ಮಾಡಿ ಸರಕಾರದ ತೇಜೋವಧೆಗೆ ಮುಂದಾಗಿದೆ ಎಂದು ನಗರಾಭಿವೃದ್ಧಿ ಖಾತೆ ಸಚಿವ ಕೆ.ಜೆ.ಜಾರ್ಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆತ್ಮಹತ್ಯೆಗೆ ಶರಣಾದ ಡಿವೈಎಸ್‌ಪಿ ಎಂ.ಕೆ. ಗಣಪತಿಯವರ ಫೋನ್‌ಕಾಲ್‌ಗಳಿಗೂ ನನಗೂ ಯಾವುದೇ ಸಂಬಂಧವಿಲ್ಲ. ಒಂದು ವೇಳೆ ಪುರಾವೆಗಳಿದ್ದಲ್ಲಿ ತೋರಿಸಲಿ. ಇಲ್ಲವಾದಲ್ಲಿ ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿರುವುದರಿಂದ ಕೋರ್ಟ್‌ಗೆ ಪುರಾವೆಗಳನ್ನು ಸಲ್ಲಿಸಲಿ ಎಂದು ಸವಾಲ್ ಹಾಕಿದ್ದಾರೆ.
 
ಗಣಪತಿ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಸಾಕ್ಷ್ಯಗಳನ್ನು ತಿರುಚಲಾಗಿದೆ ಎನ್ನುವ ಆರೋಪಗಳಲ್ಲಿ ಸತ್ಯಾಂಶವಿಲ್ಲ. ಒಂದು ವೇಳೆ ದಾಖಲೆಗಳಿದ್ದಲ್ಲಿ ಬಹಿರಂಗಪಡಿಸಲಿ. ಕೇವಲ ಆರೋಪಗಳನ್ನು ಮಾಡುವುದೇ ಬಿಜೆಪಿ ನಾಯಕರ ಕಾಯಕವಾಗಿದೆ ಎಂದು ಕಿಡಿಕಾರಿದ್ದಾರೆ.
 
ಸಿಐಡಿ ವರದಿಯನ್ನು ವಿರೋಧಿಸಿ ದಾಖಲಿಸಿದ ದೂರಿನ ವಿಚಾರಣೆ ಸುಪ್ರೀಂಕೋರ್ಟ್‌ನಲ್ಲಿ ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿ ಪ್ರಕರಣವನ್ನು ಸಿಬಿಐಗೆ ವಹಿಸಲು ಸಾಧ್ಯವಿಲ್ಲ ಎನ್ನುವುದು ಬಿಜೆಪಿ ನಾಯಕರಿಗೆ ಗೊತ್ತಿಲ್ಲವೇ? ಎಂದು ನಗರಾಭಿವೃದ್ಧಿ ಖಾತೆ ಸಚಿವ ಕೆ.ಜೆ.ಜಾರ್ಜ್ ತಿರುಗೇಟು ನೀಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತದ ಮೇಲೆ 50 ಶೇಕಡಾ ಸುಂಕದ ಬರೆ ಹಾಕಿದ ಡೊನಾಲ್ಡ್ ಟ್ರಂಪ್

ಭುವನೇಶ್ವರ: ಸ್ನೇಹಿತನಿಂದ ಬ್ಲ್ಯಾಕ್‌ಮೇಲ್‌: ಹೆದರಿ ಪೆಟ್ರೋಲ್ ಹಚ್ಚಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ

ಹೆಲ್ಮೆಟ್ ಇಲ್ಲದೆ, ಪೆಟ್ರೋಲ್ ಇಲ್ಲ: ಪೆಟ್ರೋಲ್ ಹಾಕಿಸಿಕೊಳ್ಳಲು ಬೈಕ್ ಸವಾರ ಮಾಡಿದ ಕಸರತ್ತು ವೈರಲ್

ವಿಕ್ಟೋರಿಯಾ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ದಿಡೀರ್ ಭೇಟಿ ಹಿಂದಿನ ಕಾರಣ ಇಲ್ಲಿದೆ

ಧರ್ಮಸ್ಥಳ: ನಿರ್ಣಾಯಕ ಘಟಕ್ಕೆ ತಲುಪುತ್ತಿರುವಾಗಲೇ ಮತ್ತೊಬ್ಬ ಅಪರಿಚಿತ ಎಂಟ್ರಿ

ಮುಂದಿನ ಸುದ್ದಿ
Show comments