ಬಿಜೆಪಿ-ಜೆಡಿಎಸ್ ಮೈತ್ರಿ: ಆರು ಎಂಪಿ ಕ್ಷೇತ್ರಗಳಿಗೆ ಡಿಮ್ಯಾಂಡ್ ಇಟ್ರಾ ಎಚ್‌ಡಿಕೆ....?

Webdunia
ಸೋಮವಾರ, 30 ಅಕ್ಟೋಬರ್ 2023 (21:00 IST)
೨೦೨೪ರ ಮಹಾಸಮರಕ್ಕೆ ಈಗಾಗಲೇ ದಳಪತಿಗಳು ಮತ್ತು ಬಿಜೆಪಿಯ ನಡುವೆ ಮೈತ್ರಿ ಮಾತುಕತೆ ಆಗಿದೆ. ಆದರೆ ಇದುವರೆಗೂ ಜೆಡಿಎಸ್‌ಗೆ ಬಿಜೆಪಿಯ ಕೇಂದ್ರದ ವರಿಷ್ಠರು ಅದೆಷ್ಟು ಲೋಕಸಭಾ  ಕ್ಷೇತ್ರಗಳನ್ನು ಬಿಟ್ಟು ಕೊಡುತ್ತೆ ಅನ್ನೋದರ ಬಗ್ಗೆ ಸ್ಪಷ್ಟ ಚಿತ್ರಣ ಹೊರ ಬಿದ್ದಿಲ್ಲ. 
 
ಡೆಲ್ಲಿಗೆ ಹೋಗಿ ಕೇಂದ್ರದ ಬಿಜೆಪಿ ವರಿಷ್ಠರ ಜೊತೆ ಹೆಚ್.ಡಿ ಕುಮಾರಸ್ವಾಮಿ ಅಧಿಕೃತವಾಗಿ ಮೈತ್ರಿ ಖಾತ್ರಿ ಮಾಡಿಕೊಂಡ ಬಳಿಕ, ೨೮ ಲೋಕಸಭಾ ಕ್ಷೇತ್ರಗಳಲ್ಲಿ ದಳಪತಿಗಳಿಗೆ ಸಿಗೋದು ಎಷ್ಟು ಎಂಬುದರ ಬಗ್ಗೆ ಹೆಚ್‌ಡಿಡಿ ಆಗಲಿ, ಇಲ್ಲ ಕುಮಾರಸ್ವಾಮಿ ಆಗಲೀ ಸ್ಪಷ್ಟವಾದ ಮಾಹಿತಿ ಕೊಟ್ಟಿಲ್ಲ. ಆ ಕಡೆ ಬಿಜೆಪಿಯ ಕಡೆಯಿಂದಲೂ ಜೆಡಿಎಸ್‌ಗೆ ಎಷ್ಟು ಕ್ಷೇತ್ರಗಳು ಸಿಗಲಿವೆ, ಅನ್ನೋದರ ಬಗ್ಗೆ ಸ್ಪಷ್ಟಿಕರಣ ಸಿಕ್ಕಿಲ್ಲ..
 
ಆದರೆ ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯಲ್ಲಿ ಯಾರಿಗೆ ಎಷ್ಟು ಕ್ಷೇತ್ರ ಎಂಬುದರ ಬಗ್ಗೆ ಚರ್ಚಿಸಲು ಜೆಡಿಎಸ್ ನಾಯಕ ಹೆಚ್.ಡಿ ಕುಮಾರಸ್ವಾಮಿಯವರು ನವಂಬರ್ ೩ರಂದು ಡೆಲ್ಲಿಗೆ ತೆರಳಲಿದ್ದಾರೆ. ಮೊದಲಿಗೆ ಮೈತ್ರಿಯ ಮುಂದಾಳತ್ವ ವಹಿಸಿದ್ದ ಗೋವಾ ಸಿಎಂ ಪ್ರಮೋದ್ ಸಾವಂತ್‌ರನ್ನು ಹೆಚ್‌ಡಿಕೆ ಭೇಟಿ ಮಾಡಲಿದ್ದಾರೆ. ಆ ಬಳಿಕ ಕೆಲವೇ ದಿನಗಳ ಬಳಿಕ ಬಿಜೆಪಿಯ ವರಿಷ್ಠರ ಜೊತೆ ಜೆಡಿಎಸ್ ನಾಯಕರು ಸಭೆ ನಡೆಸಲಿದ್ದಾರೆ ಅನ್ನುವ ಮಾಹಿತಿ ಕೇಳಿ ಬರ್ತಾ ಇದೆ.
 
ದಳಪತಿಗಳ ಹೀಗೊಂದು ಬೇಡಿಕೆ ಇಡಬಹುದು ಅನ್ನುವ ಲೆಕ್ಕಾಚಾರ ಮುನ್ನಲೆಗೆ ಬಂದಿದೆ. ೨೮ ರಾಜ್ಯದ ಲೋಕಸಭಾ ಕ್ಷೇತ್ರಗಳ ಪೈಕಿ, ಜೆಡಿಎಸ್ ಪ್ರಮುಖವಾದ ಆರು ಕ್ಷೇತ್ರಗಳನ್ನು ಬಿಟ್ಟು ಕೊಡುವಂತೆ, ಮೋದಿ ಮತ್ತು ಅಮಿತ್‌ಶಾ ಜೊತೆಗೆ ಹೆಚ್.ಡಿ ಕುಮಾರಸ್ವಾಮಿ ಬೇಡಿಕೆ ಇಟ್ಟು ಬರಬಹುದು ಎನ್ನಲಾಗ್ತಿದೆ.

ಅದೇನೇ ಇರಲಿ ಜೆಡಿಎಸ್ ಮತ್ತು ಬಿಜೆಪಿಯ ಮೈತ್ರಿ ರಾಜಕಾರಣ, ಸದ್ಯ ರಾಜ್ಯದಲ್ಲಿ ಗ್ಯಾರಂಟಿ ದರ್ಬಾರ್ ನಡೆಸುತ್ತಿರುವ ಕಾಂಗ್ರೆಸ್‌ಗೆ ಅದ್ಯಾವ ಮಟ್ಟಿಗೆ ಪ್ರತಿರೋದವನ್ನು ಒಡ್ಡುತ್ತೋ ಅಂತ ಕಾದಷ್ಟೇ ನೋಡಬೇಕು......?

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೂತನ ರಾಜ್ಯ ಮಾಹಿತಿ ಆಯುಕ್ತರಿಗೆ ಪ್ರಮಾಣ ವಚನ ಬೋಧಿಸಿದ ಥಾವರ್ ಚಂದ್ ಗೆಹ್ಲೋಟ್

ರಾಜ್ಯ ಕಾಂಗ್ರೆಸ್ ಪಕ್ಷಕ್ಕೆ ಡಿ.ಕೆ. ಶಿವಕುಮಾರ್ ಬ್ಲ್ಯಾಕ್‍ಮೇಲ್: ಛಲವಾದಿ ನಾರಾಯಣಸ್ವಾಮಿ

ಪ್ರಚೋದನಕಾರಿ ಭಾಷಣ ಮಾಡಿದ ಕನ್ನೇರಿ ಕಾಡಸಿದ್ಧೇಶ್ವರ ಶ್ರೀಗಳಿಗೆ ಬಿಗ್‌ಶಾಕ್

ನಿಷೇಧ ಆರ್ ಎಸ್ಎಸ್ ಗೆ ಮಾತ್ರನಾ, ಬೇರೆ ಧರ್ಮಕ್ಕೂ ಇದೆಯಾ: ಪ್ರಿಯಾಂಕ್ ಖರ್ಗೆ ಹೇಳಿದ್ದೇನು

ಚಲಿಸುತ್ತಿದ್ದ ರೈಲ್ವಿನಲ್ಲಿ ಹೆರಿಗೆ ನೋವು, ಪ್ರಯಾಣಿಕನೊಬ್ಬನ ದೈರ್ಯಕ್ಕೆ ಭಾರೀ ಮೆಚ್ಚುಗೆ, Video

ಮುಂದಿನ ಸುದ್ದಿ
Show comments