ಪ್ರಧಾನಿ ಮೋದಿ ಹುಟ್ಟುಹಬ್ಬಕ್ಕೆ ಉದ್ಯೋಗ ಮೇಳ: ಯುವಕರಿಗೆ ಪ್ರಯೋಜನವಾಗಲಿ ಎಂದ ವಿಜಯೇಂದ್ರ

Krishnaveni K
ಬುಧವಾರ, 17 ಸೆಪ್ಟಂಬರ್ 2025 (13:25 IST)
ಕಲಬುರಗಿ: ಯುವ ಸಮೂಹ ಉದ್ಯೋಗ ಮೇಳಗಳ ಸದುಪಯೋಗ ಪಡೆದುಕೊಳ್ಳಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ.
 
ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ  ಜೀ ಅವರ ಜನ್ಮದಿನದ ಅಂಗವಾಗಿ ಕಲಬುರ್ಗಿಯಲ್ಲಿ ಇಂದು ಪಕ್ಷದ ನಗರ ಜಿಲ್ಲಾಧ್ಯಕ್ಷ ಚಂದು ಪಾಟೀಲ್ ಅವರ ನೇತೃತ್ವದಲ್ಲಿ ಆಯೋಜಿಸಿದ್ದ 75@ಉದ್ಯೋಗ ಮಹೋತ್ಸವ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
 
ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಜೀ ಅವರು ದೇಶದಲ್ಲಿ ಉದ್ಯೋಗ ಸೃಷ್ಟಿಸುವ ನಿಟ್ಟಿನಲ್ಲಿ ಮಹತ್ವದ ಗುರಿ ತಲುಪಿ ಮುನ್ನಡೆಯುತ್ತಿದ್ದಾರೆ. ಯುವಕರು ಉದ್ಯೋಗದಾತರಾಗಬೇಕೆಂದು ಹಲವು ಯೋಜನೆಗಳು ಹಾಗೂ ವಿಪುಲ ಅವಕಾಶಗಳನ್ನು ಕಲ್ಪಿಸಿದ್ದಾರೆ, ನಮ್ಮ ಯುವ ಸಮುದಾಯ ಸದುಪಯೋಗ ಪಡಿಸಿಕೊಂಡು ರಾಷ್ಟ್ರಕ್ಕೆ ಕೊಡುಗೆ ನೀಡಬೇಕೆಂಬ ಕರೆ ನೀಡಿದರು.

ಕಲ್ಯಾಣ ಕರ್ನಾಟಕ ಭಾಗದ ನಿರುದ್ಯೋಗಿ ಯುವ ಸಮೂಹಕ್ಕೆ ಉದ್ಯೋಗ ನೀಡುವ ಮಹತ್ವದ ಉದ್ದೇಶದಿಂದ ಆಯೋಜಿಸಿರುವ ಇಂದಿನ ಉದ್ಯೋಗ ಮೇಳ ಹೆಚ್ಚಿನ ಉದ್ಯೋಗ ಅವಕಾಶ ಒದಗಿಸುವ ನಿಟ್ಟಿನಲ್ಲಿ ಯಶಸ್ವಿಯಾಗಲೆಂದು ಶುಭ ಹಾರೈಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ನಾಳೆ ಲಾಲ್‌ ಕ್ವಿಲಾ ಮೆಟ್ರೋ ನಿಲ್ದಾಣ ಬಂದ್‌

ದೆಹಲಿ ಕಾರು ಸ್ಫೋಟ: ಅಮಿತ್ ಶಾ ರಾಜೀನಾಮೆಗೆ ಹೆಚ್ಚಿದ ಒತ್ತಾಯ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಲಾಲೋಕ ಮಳಿಗೆ, ಏನೆಲ್ಲಾ ಸಿಗಲಿದೆ ಗೊತ್ತಾ

ಕಾರು ಸ್ಫೋಟದ ಹಿಂದಿನ ಪ್ರತಿಯೊಬ್ಬ ಅಪರಾಧಿಯನ್ನು ಭೇಟೆಯಾಡಿ: ಅಮಿತ್ ಶಾ

ದೆಹಲಿಯಲ್ಲಿ ಕಾರು ಸ್ಫೋಟ: ರಾಜ್ಯದ ಈ ಜಿಲ್ಲೆಯಲ್ಲಿ ಹೆಚ್ಚಿನ ಭದ್ರತೆ

ಮುಂದಿನ ಸುದ್ದಿ
Show comments