ಈಶ್ವರಪ್ಪಗೆ ಬಿಜೆಪಿ ಹೈಕಮಾಂಡ್ ಕೊಟ್ಟಿತ್ತು ಬಿಗ್ ಆಫರ್

Krishnaveni K
ಸೋಮವಾರ, 18 ಮಾರ್ಚ್ 2024 (08:01 IST)
ಬೆಂಗಳೂರು: ಶಿವಮೊಗ್ಗ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದ ಕೆಎಸ್ ಈಶ್ವರಪ್ಪಗೆ ಬಿಜೆಪಿ ಹೈಕಮಾಂಡ್ ಭರ್ಜರಿ ಆಫರ್ ಕೊಟ್ಟಿತ್ತು. ಆದರೂ ಅವರ ಅಸಮಾಧಾನ ಶಮನವಾಗಿಲ್ಲ.

ತಮ್ಮ ಪುತ್ರ ಕಾಂತೇಶ್ ನಿಗೆ ಟಿಕೆಟ್ ಸಿಗದ ಅಸಮಾಧಾನಕ್ಕೆ ಈಶ‍್ವರಪ್ಪ ಶಿವಮೊಗ್ಗದಿಂದ ತಾವೇ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ತೀರ್ಮಾನಿಸಿದ್ದು ಬಿಜೆಪಿಗೆ ತಲೆನೋವಾಗಿದೆ. ಅವರನ್ನು ಸಮಾಧಾನಿಸಲು ಯತ್ನಿಸುತ್ತಿದೆ. ಆದರೆ ಈಶ್ವರಪ್ಪಗೆ ಯಡಿಯೂರಪ್ಪ ಮತ್ತು ಮಕ್ಕಳೇ ತಮಗೆ ಮತ್ತು ಪುತ್ರನಿಗೆ ಟಿಕೆಟ್ ಮಿಸ್ ಆಗಲು ಕಾರಣ ಎಂಬ ಅಸಮಾಧಾನವಿದೆ.

ಈ ನಡುವೆ ಅವರನ್ನು ಮನವೊಲಿಸಲು ಬಿಜೆಪಿ ಕೇಂದ್ರ ನಾಯಕರು ಈಶ್ವರಪ್ಪ ಪುತ್ರ ಕಾಂತೇಶ್ ಗೆ ಎಂಎಲ್ ಸಿ ಹುದ್ದೆಯ ಭರ್ಜರಿ ಆಫರ್ ನೀಡಿದ್ದರು. ಆದರೆ ಈಶ್ವರಪ್ಪ ಈ ಆಫರ್ ತಿರಸ್ಕರಿಸಿದ್ದಾರೆ. ನನ್ನ ಮಗನಿಗೆ ಎಂಎಲ್ ಸಿ, ಎಂಪಿ ಸ್ಥಾನ ಕೊಡುವುದಲ್ಲ. ಪಕ್ಷ ಶುದ್ಧಿಯಾಗಬೇಕು. ಸಾಕಷ್ಟು ಕಾರ್ಯಕರ್ತರ ನೋವಿಗೆ ಪರಿಹಾರ ಸಿಗಬೇಕು ಎಂಬುದೇ ನನ್ನ ಉದ್ದೇಶ ಎಂದಿದ್ದಾರೆ.

ಶಿವಮೊಗ್ಗದಿಂದ ಬಿಜೆಪಿ ಅಧಿಕೃತ ಅಭ್ಯರ್ಥಿಯಾಗಿ ಯಡಿಯೂರಪ್ಪ ಪುತ್ರ ಬಿವೈ ವಿಜಯೇಂದ್ರ ಕಣಕ್ಕಿಳಿದಿದ್ದಾರೆ. ಇದು ಈಶ್ವರಪ್ಪ ಆಕ್ರೋಶಕ್ಕೆ ಕಾರಣವಗಿದೆ. ಮೋದಿ ಕರ್ಯಕ್ರಮಕ್ಕೆ ಬರಲು ಆಹ್ವಾನ ನೀಡಿದ್ದರೂ ತಿರಸ್ಕರಿಸಿದ್ದಾರೆ. ಗೆದ್ದ ಬಳಿಕ ಮೋದಿಗೆ ಬೆಂಬಲ ನೀಡುವುದಾಗಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಿಳೆಯರಿಗೆ ಸಿದ್ದರಾಮಯ್ಯ ಸರ್ಕಾರದ ಗಿಫ್ಟ್: ಇನ್ನು ತಿಂಗಳಿಗೊಂದು ವೇತನ ಸಹಿತ ಮುಟ್ಟಿನ ರಜೆ

17ಮಕ್ಕಳ ಸಾವಿಗೆ ಕಾರಣಾವಾದ ಕೆಮ್ಮು ಸಿರಪ್‌ ಕಂಪನಿಯ ಮಾಲೀಕ ಕೊನೆಗೂ ಅರೆಸ್ಟ್‌

ಉರಿಸೋದು ಅಂದ್ರೆ ಇದು... ಊಟದ ಮೆನುವಿನಲ್ಲಿ ಪಾಕಿಸ್ತಾನವನ್ನು ಹುರಿದು ಮುಕ್ಕಿದ ಭಾರತೀಯ ಸೇನೆ

ಐಪಿಎಸ್‌ ಅಧಿಕಾರಿ ವೈ.ಪೂರನ್‌ ಕುಮಾರ್‌ ಆತ್ಮಹತ್ಯೆಯ ಕಾರಣ ಬಹಿರಂಗಪಡಿಸಿದ ಪತ್ನಿ ಅಮ್ನೀತ್‌

ಬೆಸ್ಟ್ ಫಿನ್ಟೆಕ್ ಇನ್ಶುರೆನ್ಸ್ ಅವಾರ್ಡ್ ಪಡೆದ ಡಿಜಿಟ್ ಇನ್ಶುರೆನ್ಸ್

ಮುಂದಿನ ಸುದ್ದಿ
Show comments