ಜೆಡಿಎಸ್ ಶಾಸಕನ ವಿರುದ್ಧ ಬಿಜೆಪಿ ಮುಖಂಡ ವಾಗ್ದಾಳಿ

Webdunia
ಶನಿವಾರ, 9 ಫೆಬ್ರವರಿ 2019 (18:26 IST)
ಜೆಡಿಎಸ್ ಶಾಸಕರೊಬ್ಬರ ವಿರುದ್ಧ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಾಗ್ದಾಳಿ ನಡೆಸಿದ್ದಾರೆ.

ಯಾದಗಿರಿ ಜಿಲ್ಲೆಯ ಗುರುಮಠಕಲ್ ಪಟ್ಟಣದ ಸಾಮ್ರಾಟ್ ಹೋಟೆಲ್ ನಲ್ಲಿ  ಬಿಜೆಪಿ ಕಾರ್ಯಕರ್ತರ ಸಭೆ ನಡೆಯಿತು.  ಮುಂಬರುವ ಲೋಕಸಭಾ ಚುನಾವಣೆಯ ತಯಾರಿ ಕುರಿತು ಸಭೆ ನಡೆಸಲಾಯಿತು.

ಪ್ರಧಾನಿ ನರೇಂದ್ರ ಮೋದಿಯವರ ಜನಪರ ಯೋಜನೆಗಳನ್ನು ಜನರಿಗೆ ಮನವರಿಕೆ ಮಾಡಿಸಬೇಕು. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯನ್ನು ಹೆಚ್ಚು ಮತಗಳಿಂದ ಗೆಲ್ಲಿಸುವ ಮೂಲಕ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಬೇಕೆಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ್ ಸದಸ್ಯ ಎನ್ .ರವಿಕುಮಾರ ಹೇಳಿದರು.

ಗುರುಮಿಟಕಲ್ ಸ್ಥಳೀಯ ಜೆಡಿಎಸ್ ಶಾಸಕರು ಕ್ಷೇತ್ರದ ಸಮಸ್ಯೆಗಳ ಬಗ್ಗೆ ಗಮನ ಹರಿಸುತ್ತಿಲ್ಲ. ಕಳೆದ ಎಂಟು ತಿಂಗಳುಗಳಿಂದ ಯಾವುದೇ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿಲ್ಲ. ಕೇಂದ್ರ ಸರಕಾರದ ಬಹುತೇಕ ಯೋಜನೆಗಳನ್ನು ತಾವೇ ಮಾಡಿಸಿದ್ದು ಎಂದು ಹೇಳುತ್ತಾ ಜನತೆಯ ದಾರಿ ತಪ್ಪಿಸುತ್ತಿದ್ದಾರೆ. ಮುಖ್ಯಮಂತ್ರಿಯವರ ಆಪ್ತ ವಲಯದಲ್ಲಿ ಗುರುತಿಸಿಕೊಂಡ ಇವರು, ಬಜೆಟ್ ನಲ್ಲಿ ಯಾದಗಿರಿ ಜಿಲ್ಲೆಗೆ ಏನು ಕೊಡುಗೆ ಕೊಟ್ಟಿದ್ದಾರೆ? ಎಂದು ಶಾಸಕರ ವಿರುದ್ಧ ಹರಿಹಾಯ್ದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಡವರನ್ನು ಯಾಮಾರಿಸ್ತೀರಾ, ಮಗು ಸಾವಿಗೆ ಕೇವಲ 2 ಲಕ್ಷನಾ..: ಕರ್ನಾಟಕ ಹೈಕೋರ್ಟ್ ಜಡ್ಜ್ ತೀರ್ಪಿಗೆ ನೆಟ್ಟಿಗರು ಫಿದಾ Video

ಮಾನನಷ್ಟ ಮೊಕದ್ದಮೆ ಕೇಸ್‌: ರಾಹುಲ್ ಗಾಂಧಿ ಕ್ಷಮೆಯಾಚನೆ

ಈಚೆಗೆ ಕೆಟ್ಟು ನಿಂತ ಮಾರ್ಗದಲ್ಲೇ ಮತ್ತೇ ಕೈಕೊಟ್ಟ ನಮ್ಮ ಮೆಟ್ರೋ, ಅಷ್ಟಕ್ಕೂ ಆಗಿದ್ದೇನೂ ಗೊತ್ತಾ

ಆರ್‌ಎಸ್‌ಎಸ್‌ನ್ನು ಪ್ರಶ್ನಿಸಿದರೆ ಬಿಜೆಪಿ ಬುಸುಗುವುದೇಕೆ: ಪ್ರಿಯಾಂಕ್ ಖರ್ಗೆ ಪ್ರಶ್ನೆ

ಮುಂದಿನ ಸುದ್ದಿ
Show comments