Webdunia - Bharat's app for daily news and videos

Install App

ಬಿಜೆಪಿ ಮುಖಂಡ ಚಿ.ನಾ.ರಾಮು ಗೆ ಅಪರಿಚಿತ ವ್ಯಕ್ತಿಯಿಂದ ಬೆದರಿಕೆ

Webdunia
ಭಾನುವಾರ, 22 ಆಗಸ್ಟ್ 2021 (20:27 IST)
ಬೆಂಗಳೂರು: ಬಿಜೆಪಿ ಮುಖಂಡ, ಡಾ.ಅಂಬೇಡ್ಕರ್ ಫೌಂಡೇಷನ್‌ ನಿರ್ದೇಶಕ, ರಾಷ್ಟ್ರೀಯ ಎಸ್.ಸಿ ಮೋರ್ಚಾ ಕಾರ್ಯದರ್ಶಿ ಚಿ.ನಾ.ರಾಮು ಅಪರಿಚಿತ ವ್ಯಕ್ತಿಯಿಂದ ಬೆದರಿಕೆ ಒಡ್ಡಲಾಗಿದೆ ಎಂದು ದೂರು ದಾಖಲಿಸಿದ್ದಾರೆ. 
 
ದೂರು ದಾಖಲು: 
 
ಅಪರಿಚಿತ ವ್ಯಕ್ತಿ ಫೋನ್‌ ಮಾಡಿ ಹಣ ನೀಡುವಂತೆ ಬೆದರಿಕೆ ಹಾಕಿದ್ದಾನೆ. ಫೇಸ್‌ಬುಕ್‌ ಮೆಸೆಂಜರ್‌ ಮೂಲಕ ಪರಿಚಯವಾಗಿದ್ದ ಮಹಿಳೆ ಮೊಬೈಲ್ ನಂಬರ್ ಪಡೆದು ವಾಟ್ಸ್ ಆಪ್ ಮೂಲಕ ನಮ್ಮ ವಿಡಿಯೋ ಕಾಲ್ ಮಾಡಿದ್ದಳು. ವಿಡಿಯೋ ದಲ್ಲಿ ಅಸಭ್ಯವಾಗಿ ವರ್ತಿಸಿದ್ದಳು. ಆ ಬಳಿಕ ಅಪರಿಚಿತ ವ್ಯಕ್ತಿ ಕರೆ ಮಾಡಿ ಹಣ ನೀಡುವಂತೆ ಬೆದರಿಕೆ ಒಡ್ಡುತ್ತಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. 
 
ಸೈಬರ್ ಪೊಲೀಸರಿಂದ ತನಿಖೆ:
 
ಯುವತಿಯೊಂದಿಗೆ ನಗ್ನವಾಗಿರುವ ವಿಡಿಯೋ ನನ್ನ ಬಳಿ ಇದೆ. ಹಣ ನೀಡದಿದ್ದರೆ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದಾನೆ ಎಂದು ಬೆಂಗಳೂರು ಸೆಂಟ್ರಲ್ ಸಿಇಎನ್ ಸೈಬರ್ ಠಾಣೆಗೆ ದೂರು ಸಲ್ಲಿಸಿದ್ದಾರೆ.
 
ವ್ಯಕ್ತಿಯ ಬೆದರಿಕೆ ಹೆದರಿ ಬಿಜೆಪಿ ಮುಖಂಡ ಚಿ.ನಾ.ರಾಮು ಈಗಾಗಲೇ 31,500 ರೂ ಹಣವನ್ನು ಅಪರಿಚಿತನ ಖಾತೆಗೆ ಜಮೆ ಮಾಡಿದ್ದಾರೆ. ದೂರನ್ನು ಆಧರಿಸಿ ಎಫ್ಐಆರ್ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
 
ಅಂಬೇಡ್ಕರ್ ಫೌಂಡೇಶನ್:
 
ಚಿ.ನಾ.ರಾಮು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯ ಅಧೀನ ಸಂಸ್ಥೆಯಾದ ಅಂಬೇಡ್ಕರ್ ಫೌಂಡೇಶನ್ ನಿರ್ದೇಶಕರಾಗಿ  ಕಾರ್ಯನಿರ್ವಹಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments