ಆರ್. ಅಶೋಕ್ ಗೆ ಟಕ್ಕರ್ ನೀಡಿದ ಬಿಜೆಪಿ ಮುಖಂಡ

Webdunia
ಸೋಮವಾರ, 4 ಫೆಬ್ರವರಿ 2019 (15:47 IST)
ಸುಮಲತಾ ಅಂಬರೀಶ್ ಅವರಿಗೆ ಹುಚ್ಚು ಇದೆಯಾ? ಹೀಗಂತ ಬಿಜೆಪಿ ಮುಖಂಡರೊಬ್ಬರು ಪ್ರಶ್ನಿಸಿದ್ದಾರೆ.
ಬಿಜೆಪಿಯಿಂದ ಸ್ಪರ್ಧಿಸಲು ಸುಮಲತಾ ಅವ್ರಿಗೆ ಹುಚ್ಚಿದ್ಯ..? ಹೀಗಂತ ಅಂಬರೀಷ್ ಪತ್ನಿ ಸುಮಲತಾರನ್ನು ಪರೋಕ್ಷವಾಗಿ ಬಿಜೆಪಿಗೆ ಆಹ್ವಾನಿಸಿದ ಆರ್. ಆಶೋಕ್‌ಗೆ ಟಕ್ಕರ್ ಡಾ.ಸಿದ್ದರಾಮಯ್ಯ ಟಕ್ಕರ್ ಕೊಟ್ಟಿದ್ದಾರೆ.

ಡಾ.ಸಿದ್ದರಾಮಯ್ಯ ಕಳೆದ ಮಂಡ್ಯ ಲೋಕಸಭಾ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿಯಾಗಿದ್ದರು. ಮುಂದಿನ ಲೋಕಸಭಾ ಚುನಾವಣೆಗೂ ಮಂಡ್ಯದಿಂದ ನಾನೇ ಬಿಜೆಪಿ ಅಭ್ಯರ್ಥಿ ಎಂದು ಡಾ.ಸಿದ್ದರಾಮಯ್ಯ ಹೇಳಿದರು. ಆರ್. ಆಶೋಕ್ ಅವರು ಸುಮಲತಾ ಅವರನ್ನು ಪರೋಕ್ಷವಾಗಿ ಬಿಜೆಪಿಗೆ ಆಹ್ವಾನಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಅಂಬರೀಶ್ ಹಾಗೂ ಸುಮಲತಾ ಅವರು ಕಾಂಗ್ರೆಸ್‌ನಲ್ಲಿ ಗುರುತಿಸಿಕೊಂಡಿದ್ದಾರೆ. ಅವರಿಗೆ  ಬಿಜೆಪಿಯಿಂದ ಸ್ಪರ್ಧೆ ಮಾಡುವ ಅವಶ್ಯಕತೆ ಇಲ್ಲ. ಸಮ್ಮಿಶ್ರ ಸರ್ಕಾರದ ವತಿಯಿಂದ ಸ್ಪರ್ಧೆ ಮಾಡೋದು ಬಿಟ್ಟು, ವಿರೋಧ ಪಕ್ಷದಿಂದ ಕಣಕ್ಕಿಳಿಯಲು ಸುಮಲತಾ ಅವರಿಗೆ ಹುಚ್ಚಿದ್ಯ...? ಎಂದು ಪ್ರಶ್ನೆ ಮಾಡಿದ್ದಾರೆ.

ನನಗೆ ವರಿಷ್ಠರು ಹೇಳಿದ್ದಾರೆ, ನಾನು ಕ್ಷೇತ್ರದ ಎಲ್ಲಾ ಕಾರ್ಯಕರ್ತರ ಸಭೆಗಳಲ್ಲಿ ಭಾಗವಹಿಸುತ್ತಿದ್ದೇನೆ. ಚುನಾವಣೆ ಮುಗಿದ ಬಳಿಕ‌ ನಿಮ್ಮ ಸೇವೆ ಮಾಡ್ತೇನೆ ಎಂದು ನಮ್ಮ‌ ಕಾರ್ಯಕರ್ತರಿಗೆ ಮಾತು ನೀಡಿದ್ದೆ. ಕೊಟ್ಟ ಮಾತಿನಂತೆ ನಾನು ಕಾರ್ಯಕರ್ತರ‌ ಜೊತೆಯಲ್ಲೇ ಇದ್ದೇನೆ. ವರಿಷ್ಠರು ನನಗೆ ಟಿಕೆಟ್ ನೀಡ್ತಾರೆ. ಹಾಗಾಗಿ ನನ್ನ ಕೆಲಸ ನಾನು ಮಾಡ್ತಿದ್ದೇನೆ. ಹೀಗಂತ ಮಂಡ್ಯದಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿ ಡಾ.ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಕ್ರೋಚ್‌ ಜನತಾ ಪಾರ್ಟಿಯ ಎಕ್ಸ್ ಖಾತೆಗೆ ನಿರ್ಬಂಧ ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ ಅಭಿಜಿತ್ ದೀಪ್ಕೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಪೆಟ್ರೋಲ್, ಡೀಸೆಲ್ ದರ ಹೆಚ್ಚಳದಿಂದ ರಾಜ್ಯ ಸರ್ಕಾರಕ್ಕೇ ಲಾಭ, ಆದ್ರೂ ಕಾಂಗ್ರೆಸ್ ಮೊಸಳೆ ಕಣ್ಣೀರು: ಆರ್ ಅಶೋಕ್

ಜಗತ್ತಿನಲ್ಲೇ ಅತಿ ಹೆಚ್ಚು ಪೆಟ್ರೋಲ್, ಡೀಸೆಲ್ ಬೆಲೆ ಹೊಂದಿರುವ ದೇಶ ಯಾವುದು ತಿಳಿದರೆ ಅಚ್ಚರಿಯಾಗುತ್ತೆ

ಮುಂದಿನ ಸುದ್ದಿ
Show comments