ಪೇಜಾವರ ಶ್ರೀಗಳಿಗೆ ಶೋಭಾ, ಈಶ್ವರಪ್ಪ ಮನವರಿಕೆ ಮಾಡಬಹುದಿತ್ತು: ಬಿಜೆಪಿ ನಾಯಕ ಸೊಗಡು ಶಿವಣ್ಣ

Webdunia
ಗುರುವಾರ, 7 ಜೂನ್ 2018 (09:41 IST)
ಬೆಂಗಳೂರು: ಉಡುಪಿ ಪೇಜಾವರ ಶ್ರೀಗಳು ಪ್ರಧಾನಿ ಮೋದಿ ವಿರುದ್ಧ ಮೊನ್ನೆ ನೀಡಿದ್ದ ಹೇಳಿಕೆ ಬಿಜೆಪಿಯಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಸ್ವತಃ ಶ್ರೀಗಳೇ ಸ್ಪಷ್ಟನೆ ಕೊಟ್ಟರೂ ಮುಜುಗರ ಕಡಿಮೆಯಾಗಿಲ್ಲ.

ಪ್ರಧಾನಿ ಮೋದಿ ಸರ್ಕಾರ ನಿರೀಕ್ಷಿಸಿದ ಕೆಲಸಗಳನ್ನು ಮಾಡಲು ವಿಫಲವಾಗಿದೆ ಎಂದು ಶ್ರೀಗಳು ಹೇಳಿಕೆ ನೀಡಿದ್ದು, ಬಿಜೆಪಿಗೆ ತೀವ್ರ ಮುಜುಗರವುಂಟುಮಾಡಿತ್ತು. ಇದರ ಬೆನ್ನಲ್ಲೇ ಸ್ವತಃ ಪೇಜಾವರ ಶ್ರೀ ನನ್ನ ಹೇಳಿಕೆಯನ್ನು ಮಾಧ್ಯಮಗಳು ತಪ್ಪಾಗಿ ಅರ್ಥೈಸಿವೆ. ಮೋದಿ ವಿರುದ್ಧ ನಾನು ಹೇಳಿಕೆ ನೀಡಿಲ್ಲ ಎಂದಿದ್ದರು.

ಹಾಗಿದ್ದರೂ ಬಿಜೆಪಿಯಲ್ಲಿ ಮುಜುಗರ ನಿಂತಿಲ್ಲ. ಇದೀಗ ಬಿಜೆಪಿ ನಾಯಕ ಸೊಗಡು ಶಿವಣ್ಣ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಶ್ರೀಗಳಿಗೆ ಮಾಹಿತಿ ಕೊರತೆಯಿಂದ ಈ ರೀತಿ ಹೇಳಿಕೆ ನೀಡಿದ್ದಾರೆ. ಅವರಿಗೆ ಶೋಭಾ ಕರಂದ್ಲಾಜೆ ಅಥವಾ ಈಶ್ವರಪ್ಪ ಕೇಂದ್ರದ ಸಾಧನೆಗಳ ಬಗ್ಗೆ ವಿವರಣೆ ನೀಡಬಹುದಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ. ಅಂತೂ ಶ್ರೀಗಳ ಹೇಳಿಕೆಯಿಂದ ಪಕ್ಷಕ್ಕೆ ತೀವ್ರ ಡ್ಯಾಮೇಜ್ ಆಗಿರುವುದಂತೂ ನಿಜ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಉತ್ತರಾಧಿಕಾರಿ ಚರ್ಚೆ ಆಮೇಲೆ ಇಟ್ಕೊಳ್ಳಿ, ಮೊದಲು ಅಭಿವೃದ್ಧಿ ಮಾಡಿ: ಎನ್ ರವಿಕುಮಾರ್

ಕೊನೆಗೂ ಯತೀಂದ್ರ ಸಿದ್ದರಾಮಯ್ಯಗೆ ಗುಮ್ಮಿದ ಡಿಕೆ ಶಿವಕುಮಾರ್ ಹೇಳಿದ್ದೇನು

ಪ್ರದೀಪ್ ಈಶ್ವರ್ ಎಚ್ಚರಿಕೆಯಿಂದ ಇರು ಮಗನೇ..: ಪ್ರತಾಪ್ ಸಿಂಹ ವಾರ್ನಿಂಗ್

ಆರ್ ಎಸ್ಎಸ್ ಚಡ್ಡಿ ಲೇವಡಿ ಮಾಡಿದ್ದ ಕಾಂಗ್ರೆಸ್: ಜವಹರಲಾಲ್ ನೆಹರೂ ಫೋಟೋ ರಿಲೀಸ್ ಮಾಡಿದ ಬಿಜೆಪಿ

ಕರ್ನೂಲ್ ಬಸ್ ದುರಂತದಲ್ಲಿ ಸಾವನ್ನಪ್ಪಿದವರಿಗೆ ಪರಿಹಾರ ಘೋಷಿಸಿದ ಮೋದಿ: ಸಂತಾಪ ಸೂಚಿಸಿದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments