Webdunia - Bharat's app for daily news and videos

Install App

ಪೇಜಾವರ ಶ್ರೀಗಳಿಗೆ ಶೋಭಾ, ಈಶ್ವರಪ್ಪ ಮನವರಿಕೆ ಮಾಡಬಹುದಿತ್ತು: ಬಿಜೆಪಿ ನಾಯಕ ಸೊಗಡು ಶಿವಣ್ಣ

Webdunia
ಗುರುವಾರ, 7 ಜೂನ್ 2018 (09:41 IST)
ಬೆಂಗಳೂರು: ಉಡುಪಿ ಪೇಜಾವರ ಶ್ರೀಗಳು ಪ್ರಧಾನಿ ಮೋದಿ ವಿರುದ್ಧ ಮೊನ್ನೆ ನೀಡಿದ್ದ ಹೇಳಿಕೆ ಬಿಜೆಪಿಯಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಸ್ವತಃ ಶ್ರೀಗಳೇ ಸ್ಪಷ್ಟನೆ ಕೊಟ್ಟರೂ ಮುಜುಗರ ಕಡಿಮೆಯಾಗಿಲ್ಲ.

ಪ್ರಧಾನಿ ಮೋದಿ ಸರ್ಕಾರ ನಿರೀಕ್ಷಿಸಿದ ಕೆಲಸಗಳನ್ನು ಮಾಡಲು ವಿಫಲವಾಗಿದೆ ಎಂದು ಶ್ರೀಗಳು ಹೇಳಿಕೆ ನೀಡಿದ್ದು, ಬಿಜೆಪಿಗೆ ತೀವ್ರ ಮುಜುಗರವುಂಟುಮಾಡಿತ್ತು. ಇದರ ಬೆನ್ನಲ್ಲೇ ಸ್ವತಃ ಪೇಜಾವರ ಶ್ರೀ ನನ್ನ ಹೇಳಿಕೆಯನ್ನು ಮಾಧ್ಯಮಗಳು ತಪ್ಪಾಗಿ ಅರ್ಥೈಸಿವೆ. ಮೋದಿ ವಿರುದ್ಧ ನಾನು ಹೇಳಿಕೆ ನೀಡಿಲ್ಲ ಎಂದಿದ್ದರು.

ಹಾಗಿದ್ದರೂ ಬಿಜೆಪಿಯಲ್ಲಿ ಮುಜುಗರ ನಿಂತಿಲ್ಲ. ಇದೀಗ ಬಿಜೆಪಿ ನಾಯಕ ಸೊಗಡು ಶಿವಣ್ಣ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಶ್ರೀಗಳಿಗೆ ಮಾಹಿತಿ ಕೊರತೆಯಿಂದ ಈ ರೀತಿ ಹೇಳಿಕೆ ನೀಡಿದ್ದಾರೆ. ಅವರಿಗೆ ಶೋಭಾ ಕರಂದ್ಲಾಜೆ ಅಥವಾ ಈಶ್ವರಪ್ಪ ಕೇಂದ್ರದ ಸಾಧನೆಗಳ ಬಗ್ಗೆ ವಿವರಣೆ ನೀಡಬಹುದಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ. ಅಂತೂ ಶ್ರೀಗಳ ಹೇಳಿಕೆಯಿಂದ ಪಕ್ಷಕ್ಕೆ ತೀವ್ರ ಡ್ಯಾಮೇಜ್ ಆಗಿರುವುದಂತೂ ನಿಜ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments