Webdunia - Bharat's app for daily news and videos

Install App

ಮೋದಿಯವರಿಗಿಂತ ದೊಡ್ಡವರಾದ್ರಾ ಯತ್ನಾಳ್, ಕಿತ್ತು ಬಿಸಾಕ್ರಿ ಅವ್ರನ್ನು: ರೇಣುಕಾಚಾರ್ಯ ವಾಗ್ದಾಳಿ

Krishnaveni K
ಶುಕ್ರವಾರ, 29 ನವೆಂಬರ್ 2024 (12:23 IST)
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಯತ್ನಾಳ್ ಮತ್ತು ವಿಜಯೇಂದ್ರ ಬಣದ ನಡುವೆ ತಿಕ್ಕಾಟ ಜೋರಾಗಿದೆ. ಇಂದು ಸುದ್ದಿಗೋಷ್ಠಿ ನಡೆಸಿದ ಮಾಜಿ ಸಚಿವ ರೇಣುಕಾಚಾರ್ಯ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮತ್ತು ಬಣಕ್ಕೆ ಸೆಡ್ಡು ಹೊಡೆದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಮ್ಮದೇ ತಂಡ ಕಟ್ಟಿಕೊಂಡು ವಕ್ಫ್ ವಿರುದ್ಧ ಹೋರಾಟಕ್ಕೆ ಮುಂದಾಗಿದ್ದಾರೆ. ಇದು ವಿಜಯೇಂದ್ರ ಬಣದ ಕಣ್ಣು ಕೆಂಪಗಾಗಿಸಿದೆ. ಹೈಕಮಾಂಡ್ ಗೂ ದೂರು ನೀಡಿದ್ದಾರೆ.

ಈ ನಡುವೆ ನಿನ್ನೆ ಮಾಧ್ಯಮಗಳ ಮುಂದೆ ವಿಜಯೇಂದ್ರ ಬಣದ ವಿರುದ್ಧ ವಾಗ್ದಾಳಿ ನಡೆಸಿದ್ದ ಯತ್ನಾಳ್, ಅವರು ರಾತ್ರೋ ರಾತ್ರಿ ಡಿಕೆ ಶಿವಕುಮಾರ್ ಮನೆಗೆ ಹೋಗಿ ಯಾವೆಲ್ಲಾ ಪತ್ರಕ್ಕೆ ಸಹಿ ಹಾಕಿಸಿಕೊಂಡು ಬಂದಿದ್ದಾರೆ, ಎಷ್ಟು ಭ್ರಷ್ಟಾಚಾರ ನಡೆಸಿದ್ದಾರೆ ಎಂಬುದಕ್ಕೆ ನನ್ನ ಬಳಿ ವಿಡಿಯೋ ದಾಖಲೆಯೇ ಇದೆ. ನನ್ನ ವಿರುದ್ಧ ಹೈಕಮಾಂಡ್ ಗೆ ದೂರು ಕೊಟ್ಟರೆ ಕೊಡಲಿ. ದೆಹಲಿಗೆ ಬರುವಂತೆ ನನಗೆ ಕರೆ ಬಂದಿದೆ. ಆದರೆ ನಾನು ಬರಲ್ಲ ಎಂದಿದ್ದೇನೆ. ಮೊದಲು ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಬದಲಾವಣೆಯಾಗಬೇಕು ಎಂದಿದ್ದರು.

ಇಂದು ಯತ್ನಾಳ್ ವಿರುದ್ಧ ವಾಗ್ದಾಳಿ ನಡೆಸಿದ ರೇಣುಕಾಚಾರ್ಯ ‘ಏನು ಯತ್ನಾಳ್ ಮೋದಿಗಿಂತ ದೊಡ್ಡವರಾ? ಮೋದಿಗೇ ಸೂಚನೆ ಕೊಡುವಷ್ಟು ದೊಡ್ಡವರಾಗಿ ಬಿಟ್ಟರಾ? ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನೇ ಪ್ರಶ್ನೆ ಮಾಡುತ್ತಾರೆ. ಇಂತಹವರನ್ನು ಪಕ್ಷದಿಂದ ಮುಲಾಜಿಲ್ಲದೇ ಕಿತ್ತು ಹಾಕಬೇಕು’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚುನಾವಣಾ ರಾಜಕಾರಣಕ್ಕೆ ಸೋಮಣ್ಣ ನಿವೃತ್ತಿ: ದೇವರೇ ಹೇಳಿದರೂ ಸ್ಪರ್ಧಿಸಲ್ಲ ಎಂದು ಕೇಂದ್ರ ಸಚಿವ

Karnataka Weather: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್: ಏಲ್ಲೆಲ್ಲಿ ಮಳೆ ಸಾಧ್ಯತೆ ಇಲ್ಲಿದೆ ಮಾಹಿತಿ

ಟ್ರಾಫಿಕ್‌ ಫೈನ್‌ ಆಫರ್‌ಗೆ ರಾಜಧಾನಿಯಲ್ಲಿ ಭರ್ಜರಿ ರೆಸ್ಪಾನ್ಸ್‌: ಮೊದಲ ದಿನ ವಸೂಲಿಯಾದ ದಂಡವೆಷ್ಟು ಗೊತ್ತಾ

ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನಕ್ಕಾಗಿ ತೆರಳುತ್ತಿದ್ದ ಎಂಟು ಮಂದಿ ಭೀಕರ ರಸ್ತೆ ಅಪಘಾತದಲ್ಲಿ ಬಲಿ

ಷರತ್ತುಬದ್ಧ ಜಾಮೀನು ಪಡೆದ ಮಹೇಶ್‌ ಶೆಟ್ಟಿ ತಿಮರೋಡಿಗೆ ಮತ್ತೆ ಬಂಧನದ ಭೀತಿ

ಮುಂದಿನ ಸುದ್ದಿ
Show comments