ಸರಕಾರದ ಅಡಿಪಾಯ ಕುಸಿಯುತ್ತಿದೆ ಎಂದ ನಾಯಕ

Webdunia
ಬುಧವಾರ, 3 ಅಕ್ಟೋಬರ್ 2018 (17:51 IST)
ದೋಸ್ತಿ ಸರಕಾರದವರ ಟೆಂಪಲ್ ರನ್ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಹೇಳಿಕೆ ನೀಡಿದ್ದು, ಧಾರ್ಮಿಕತೆ ಬಗ್ಗೆ ತಡವಾಗಿಯಾದರೂ ತಿಳಿದಿದ್ದು ಖುಷಿ ಸಂಗತಿ ಎಂದು ಟಾಂಗ್ ನೀಡಿದ್ದಾರೆ.

ಧಾರ್ಮಿಕತೆ ಬಗ್ಗೆ ತಡವಾಗಿಯಾದರೂ ಮೈತ್ರಿ ಸರಕಾರದ ಮುಖಂಡರಿಗೆ ತಿಳಿದಿದ್ದು ಖುಷಿ ಸಂಗತಿ. ಆದರೆ ರಾಜ್ಯದ ಕಾನೂನು ಸುವ್ಯವಸ್ಥೆ ಕಾಪಾಡುವುದ್ಯಾರು? ಹೀಗಂತ ಕುಂದಾಪುರದಲ್ಲಿ ಕೋಟ ಶ್ರೀನಿವಾಸ ಪೂಜಾರಿ ಪ್ರಶ್ನೆ ಮಾಡಿದ್ದಾರೆ.
ವಿಧಾನ ಪರಿಷತ್ ವಿಪಕ್ಷ ನಾಯಕರಾಗಿರುವ ಕೋಟ ಶ್ರೀನಿವಾಸ ಪೂಜಾರಿ, ಸರಕಾರದ ಅಡಿಪಾಯ ಕುಸಿಯುವ ಭೀತಿ ಅವರಲ್ಲಿದೆ. ಅಧಿಕಾರ ಕಳೆದುಕೊಳ್ಳುವ ಭಯದಲ್ಲಿದ್ದಾರೆ. ಸಿಎಂ, ಡಿಸಿಎಂ, ಸಚಿವರೆಲ್ಲರೂ ದೇವಸ್ಥಾನ ತಿರುಗಾಡುತ್ತಾರೆ ಎಂದು ವ್ಯಂಗ್ಯವಾಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಮನೆಗೆ ದಾಳಿಯಾಗುತ್ತದೆ. ಆಳುವ  ಪಕ್ಷದ ಗೂಂಡಾಗಳು ಅವರ ಮನೆಗೆ ನುಗ್ಗುತ್ತಾರೆ. ಇದು ಕಾನೂನು ವ್ಯವಸ್ಥೆ ಹದಗೆಟ್ಟಿದ್ದಕ್ಕೆ ಸಾಕ್ಷಿಯಾಗಿದೆ ಎಂದು ಕೋಟ ಶ್ರೀನಿವಾಸ ಪೂಜಾರಿ ಟೀಕೆ ಮಾಡಿದ್ದಾರೆ.
ರಾಜ್ಯದಲ್ಲಿನ ಮರಳು ಸಮಸ್ಯೆ ನಿವಾರಣೆಗೆ ಕ್ರಮಕೈಗೊಂಡಿಲ್ಲ. ಮನೆ ಮಂಜೂರಾದವರಿಗೆ ಮನೆ ಕಟ್ಟಲಾಗುತ್ತಿಲ್ಲ. ಸಿಎಂ ಮಾತನ್ನು ಉಡುಪಿ ಡಿಸಿ ಕೇಳದ ಪರಿಸ್ಥಿತಿಯಿದೆ. ಮೊದಲು ಉತ್ತಮ ಆಡಳಿತ ನೀಡಿ, ಬಳಿಕ ದೇವಸ್ಥಾನ ಸುತ್ತಿ ಎಂದು ಕುಂದಾಪುರದಲ್ಲಿ ಕೋಟ ವಾಗ್ದಾಳಿ ನಡೆಸಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಿಕ್ಕಪೇಟೆ ಮಾಜಿ ಸಚಿವ ಆರ್ ವಿ ದೇವರಾಜ್ ಹೃದಯಸ್ತಂಬನದಿಂದ ಸಾವು

Karnataka Weather: ಸತತ ಮಳೆ, ಮೋಡದ ನಂತರ ಇಂದಿನ ಹವಾಮಾನ ಬದಲಾವಣೆ ಗಮನಿಸಿ

ರುಬೈಯಾ ಸಯೀದ್ ಅಪಹರಣ ಪ್ರಕರಣದಲ್ಲಿ ಶಂಕಿತನ ಬಂಧನ, ಏನಿದು ಕೇಸ್

ಸಿದ್ದರಾಮಯ್ಯ ಸರ್ಕಾರದಿಂದ ರೈತರ ಅಸಡ್ಡೆ: ಬಿವೈ ವಿಜಯೇಂದ್ರ

ನಾಳೆ ಡಿಕೆ ಶಿವಕುಮಾರ್ ಮನೆಯಲ್ಲಿ ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌, ಕುತೂಹಲ ಮೂಡಿಸಿದ ನಾಯಕರ ನಡೆ

ಮುಂದಿನ ಸುದ್ದಿ
Show comments