Select Your Language

Notifications

webdunia
webdunia
webdunia
webdunia

ಅನರ್ಹ ಶಾಸಕರಿಗೆ ಟಿಕೆಟ್ ನೀಡೋ ಪ್ರಶ್ನೆಯೇ ಇಲ್ಲ ಎಂದ ಬಿಜೆಪಿ ಮುಖಂಡ

ಅನರ್ಹ ಶಾಸಕರಿಗೆ ಟಿಕೆಟ್ ನೀಡೋ ಪ್ರಶ್ನೆಯೇ ಇಲ್ಲ ಎಂದ ಬಿಜೆಪಿ ಮುಖಂಡ
ಹುಬ್ಬಳ್ಳಿ , ಭಾನುವಾರ, 27 ಅಕ್ಟೋಬರ್ 2019 (15:03 IST)
ಪಕ್ಷ ಯಾರಿಗೆ ಟಿಕೆಟ್ ನೀಡಿದರೂ ಅವರನ್ನ ಗೆಲ್ಲಿಸುವುದು ಎಲ್ಲರ ಕರ್ತವ್ಯ. ಹೀಗಂತ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹೇಳಿದ್ದಾರೆ.

ಅರವಿಂದ ಲಿಂಬಾವಳಿ, ಬಿಜೆಪಿ ಕೋರ್ ಕಮೀಟಿ ಸಭೆಯ ಬಳಿಕ ಮಾಧ್ಯಮದವರ ಜೊತೆಗೆ ಮಾತನಾಡಿದ್ರು. ಅನರ್ಹ ಶಾಸಕರ ಕ್ಷೇತ್ರಗಳ ಉಪಚುನಾವಣೆಗೆ ಸಂಬಂಧ ಪಟ್ಟಂತೆ ಆಯಾ ಕ್ಷೇತ್ರಗಳ ಮುಖಂಡರ ಅಭಿಪ್ರಾಯದ ಸಭೆ ನಡೆಸಿದ್ದೇವೆ. ಪಕ್ಷ ಯಾರಿಗೆ ಟಿಕೆಟ್ ನೀಡಿದರೂ ಅವರನ್ನ ಗೆಲ್ಲಿಸುವುದು ಎಲ್ಲರ ಕರ್ತವ್ಯ ಎಂದರು.

   ಪಕ್ಷದ ಕಾರ್ಯಕರ್ತರಲ್ಲಿ ಬಲ ತುಂಬುವ ನಿಟ್ಟಿನಲ್ಲಿ ಸಭೆ ನಡೆಸಲಾಗಿದೆ. ಕ್ಷೇತ್ರಗಳ ಅಭ್ಯರ್ಥಿಗಳು ಯಾರೆಂಬುದರ ಕುರಿತು ಇನ್ನೂ ನಿರ್ಧರಿಸಿಲ್ಲ. ಈಗ ಅನರ್ಹ ಶಾಸಕರ ಪ್ರಕರಣ ಸುಪ್ರೀಂ ಕೋರ್ಟ್ ಅಂಗಳದಲ್ಲಿದೆ. ಸುಪ್ರೀಂ ತೀರ್ಪಿನ ನಂತರ ಆಯಾ ಕ್ಷೇತ್ರಗಳಲ್ಲಿ  ಟಿಕೆಟ್ ಯಾರಿಗೆ ನೀಡಬೇಕೆಂಬುದು ತೀರ್ಮಾನ ಮಾಡಲಿದ್ದೇವೆ ಎಂದು ಅವರು ಸ್ಪಷ್ಟಪಡಿಸಿದರು. 

ರಾಜೀನಾಮೆ ನೀಡಿರುವ ಶಾಸಕರು ಈವರೆಗೂ ನಮ್ಮ ಪಕ್ಷಕ್ಕೆ ಸೇರ್ಪಡೆಗೊಂಡಿಲ್ಲ. ಸೇರ್ಪಡೆಗೊಳ್ಳುತ್ತೇವೆ ಎಂದು ಹೇಳಿಲ್ಲ. ಹೀಗಾಗಿ ಅವರಿಗೆ ಟಿಕೆಟ್ ನೀಡುವಂತಹ ಪ್ರಶ್ನೆಯೇ ಇಲ್ಲ ಎಂದರು.


Share this Story:

Follow Webdunia kannada

ಮುಂದಿನ ಸುದ್ದಿ

ಮಳೆರಾಯನ ಕಾಟದಲ್ಲೂ ದೀಪಾವಳಿ ಖರೀದಿ ಬಲು ಜೋರು