Select Your Language

Notifications

webdunia
webdunia
webdunia
webdunia

ಟಿಪ್ಪು ಜಯಂತಿಯನ್ನು ನಾವೇ ಮುಂದೆ ನಿಂತು ಆಚರಿಸುತ್ತೇವೆ-ಬಿಜೆಪಿ ನಾಯಕ ಶರತ್ ಬಚ್ಚೇಗೌಡ ಹೇಳಿಕೆ

ಟಿಪ್ಪು  ಜಯಂತಿಯನ್ನು ನಾವೇ ಮುಂದೆ ನಿಂತು ಆಚರಿಸುತ್ತೇವೆ-ಬಿಜೆಪಿ ನಾಯಕ ಶರತ್ ಬಚ್ಚೇಗೌಡ ಹೇಳಿಕೆ
ಬೆಂಗಳೂರು , ಶುಕ್ರವಾರ, 25 ಅಕ್ಟೋಬರ್ 2019 (11:29 IST)
ಬೆಂಗಳೂರು : ಟಿಪ್ಪು  ಜಯಂತಿಯನ್ನು ನಾವೇ ಮುಂದೆ ನಿಂತು ಆಚರಿಸುತ್ತೇವೆ ಎಂದು ಬಿಜೆಪಿಯ ಯುವ ಮೋರ್ಚಾ ಕಾರ್ಯದರ್ಶಿ ಶರತ್ ಬಚ್ಚೇಗೌಡ ಹೇಳಿದ್ದಾರೆ.




ಹೊಸಕೋಟೆಯಲ್ಲಿ ನಡೆದ ಉರುಸ್ ಕಾರ್ಯಕ್ರಮದಲ್ಲಿ ಮಾತನಾಡಿದ ಶರತ್ ಬಚ್ಚೆಗೌಡ ಈ ರೀತಿಯಾಗಿ ಹೇಳಿಕೆ ನೀಡಿದ್ದಾರೆ. ಟಿಪ್ಪು ಜಯಂತಿಯನ್ನು ರದ್ದುಪಡಿಸಲು ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ನಿರ್ಧರಿಸಿರುವಾಗ ಅದೇ ಪಕ್ಷದ ನಾಯಕ ಈ ರೀತಿ ಹೇಳಿಕೆ ನೀಡಿದ್ದು ಸರ್ಕಾರವನ್ನು ಮುಜುಗರಕ್ಕೀಡು ಮಾಡಿದೆ.


ಹೊಸಕೋಟೆಯ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಟಿಕೆಟ್ ಆಕಾಂಕ್ಷಿಯಾದ ಶರತ್ ಬಚ್ಚೆಗೌಡ ಅವರಿಗೆ ಸಿಎಂ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿದರೂ ಕೂಡ ಗಾಗಿ ಟಿಕೆಟ್ ಗಾಗಿ ಪಟ್ಟು ಹಿಡಿದಿದ್ದು , ಟಿಕೆಟ್ ಸಿಗದಿದ್ದರೂ ಉಪಚುನಾವಣೆಗೆ ಸ್ಪರ್ಧಿಸುವುದಾಗಿ ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಿದ್ದರಾಮಯ್ಯ ಹಿಂದೂ ಟೆರರಿಸ್ಟ್ -ಸೊಗಡು ಶಿವಣ್ಣ