Select Your Language

Notifications

webdunia
webdunia
webdunia
webdunia

ಬಿಜೆಪಿ ಮುಖಂಡ ಶ್ರೀನಿವಾಸ ಪ್ರಸಾದ್ ಅಲಿಯಾಸ್ ವಾಸು ಬರ್ಬರ ಹತ್ಯೆ

ಬಿಜೆಪಿ ಮುಖಂಡ ಶ್ರೀನಿವಾಸ ಪ್ರಸಾದ್ ಅಲಿಯಾಸ್ ವಾಸು ಬರ್ಬರ ಹತ್ಯೆ
ಬೆಂಗಳೂರು , ಮಂಗಳವಾರ, 14 ಮಾರ್ಚ್ 2017 (10:27 IST)
ಬೆಂಗಳೂರು(ಮಾ.14): ಬೆಳ್ಳಂಬೆಳಗ್ಗೆ ಬೆಂಗಳೂರು ನಗರದ ಆನೇಕಲ್`ನಲ್ಲಿ ನೆತ್ತರು ಹರಿದಿದೆ. ಬೊಮ್ಮಸಂದ್ರದ ಪುರಸಭೆಯ ಬಿಜೆಪಿ ಸದಸ್ಯ ಶ್ರೀನಿವಾಸ್ ಪ್ರಸಾದ್ ಅಲಿಯಾಸ್ ಕಿತ್ತಗಾನಹಳ್ಳಿ ವಾಸು ಅವರನ್ನ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಬೆಳಗ್ಗೆ 5.30ರ ಸುಮಾರಿಗೆ ವಾಕಿಂಗ್`ಗೆ ತೆರಳುತ್ತಿದ್ದ ಸಂದರ್ಭ  ಹೊಸೂರು ಮುಖ್ಯರಸ್ತೆಯ ಬಿಟಿಎಲ್ ಕಾಲೇಜು ಬಳಿ ಅಡ್ಡಗಟ್ಟಿರುವ ದುಷ್ಕರ್ಮಿಗಳು ಕೊಚ್ಚಿ ಕೊಂದಿದ್ದಾರೆ.

ಹಳೆ ದ್ವೇಷದ ಹಿನ್ನೆಲೆಯಲ್ಲಿ ಶ್ರೀನಿವಾಸ ಪ್ರಸಾದ್ ಅಲಿಯಾಸ್ ವಾಸು ಹತ್ಯೆ ನಡೆದಿರಬಹುದೆಂದು ಶಂಕಿಸಲಾಗಿದೆ. ಸ್ಥಳಕ್ಕೆ ಹೆಬ್ಬಗೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಗೆ ಶವ ಸಾಗಿಸಲಾಗಿದೆ. 

Share this Story:

Follow Webdunia kannada

ಮುಂದಿನ ಸುದ್ದಿ

ಟೋಲ್ ಮ್ಯಾನೇಜರ್ ಮೇಲೆ ಶಾಸಕ ಬಿ.ಸುರೇಶ್ ಗೌಡ ಗೂಂಡಾಗಿರಿ