Select Your Language

Notifications

webdunia
webdunia
webdunia
webdunia

ಸಚಿವ ಖಾದರ್‌ರಿಂದ ಇಂತಹ ಕೆಟ್ಟ ಮಾತು ಬರಬಾರದು: ಬಿಜೆಪಿ

ಸಚಿವ ಖಾದರ್‌ರಿಂದ ಇಂತಹ ಕೆಟ್ಟ ಮಾತು ಬರಬಾರದು: ಬಿಜೆಪಿ
ಬೆಂಗಳೂರು , ಬುಧವಾರ, 1 ಮಾರ್ಚ್ 2017 (17:05 IST)
ಕೇರಳ ಸಿಎಂ ಪಿಣರಾಯಿ ವಿಜಯನ್ ಭೇಟಿ ವಿರೋಧಿಸುವವರು ಚಪ್ಪಲಿಗೆ ಸಮ ಎಂದು ಆಹಾರ ಖಾತೆ ಸಚಿವ ಯು.ಟಿ.ಖಾದರ್ ಹೇಳಿಕೆ ನೀಡಿರುವುದಕ್ಕೆ ವ್ಯಂಗ್ಯವಾಡಿದ ಬಿಜೆಪಿ ವಕ್ತಾರ ಸುರೇಶ್ ಕುಮಾರ್,  ಆಹಾರ ಖಾತೆ ಸಚಿವರ ಬಾಯಿಯಲ್ಲಿಯೇ ಇಂತಹ ಮಾತುಗಳು ಬರುತ್ತವೆ ಎಂದಾದರೆ ಆಹಾರ ತಿನ್ನುವವರ ಬಾಯಿಯಲ್ಲಿ ಯಾವ ರೀತಿಯ ಮಾತುಗಳು ಬರಬಹುದು ಎಂದು ತಿರುಗೇಟು ನೀಡಿದ್ದಾರೆ.
 
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇವರು ಸರಬರಾಜು ಮಾಡುವ ಆಹಾರ ಕಲಬೆರಿಕೆಯಾಗಿದೆ ಎಂದು ಲೇವಡಿ ಮಾಡಿದ್ದಾರೆ.
 
ಕೇರಳ ಸಿಎಂ ಮಂಗಳೂರಿಗೆ ಭೇಟಿ ನೀಡಿದ್ದಾಗ ಹಿಂದೂ ಪರ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದವು. ಯಾವುದೇ ಕಾರಣಕ್ಕೂ ಕಾರ್ಯಕ್ರಮಗಳು ನಡೆಯಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದಿದ್ದವು. 
 
ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಕೇರಳ ಸಿಎಂ ವಿಜಯನ್ ಅವರಿಗೆ ಭಾರಿ ಭದ್ರತೆ ಒದಗಿಸಿ ಕಾರ್ಯಕ್ರಮ ಯಶಸ್ವಿಯಾಗಲು ಪರೋಕ್ಷ ಬೆಂಬಲ ನೀಡಿತ್ತು. 
 
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪರನ್ನು ಕೋರ್ಟ್ ನಿರಪರಾಧಿ ಎಂದು ತೀರ್ಪು ನೀಡಿದೆ. ಆದರೆ,ಸಿಎಂ ಸಿದ್ದರಾಮಯ್ಯ ಯಡಿಯೂರಪ್ಪ ಜಗತ್ತು ಕಂಡ ಮಹಾಭ್ರಷ್ಟ ಎಂದು ಟೀಕಿಸುತ್ತಿದ್ದಾರೆ ಎಂದು ಬಿಜೆಪಿ ವಕ್ತಾರ ಸುರೇಶ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

362 ಮಂದಿ ಗೆಜೆಟೆಡ್ ಪ್ರೊಬೇಷನರಿಗಳ ನೇಮಕಾತಿಗೆ ಕ್ಯಾಬಿನೆಟ್ ಸಮ್ಮತಿ