ಬಿಜೆಪಿ ನಾಯಕರು ಸಂಸ್ಕಾರ,ಸಂಸ್ಕ್ರತಿಯಿಲ್ಲದ ಪುಡಾರಿಗಳು: ಸಚಿವ ರಾಯರೆಡ್ಡಿ

Webdunia
ಭಾನುವಾರ, 3 ಡಿಸೆಂಬರ್ 2017 (13:04 IST)
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಬಿಜೆಪಿ ನಾಯಕರು ಸಂಸ್ಕಾರವಿಲ್ಲದ ಪುಡಾರಿಗಳು ಎಂದು ಉನ್ನತ ಶಿಕ್ಷಣ ಖಾತೆ ಸಚಿವ ಬಸವರಾಜ ರಾಯರೆಡ್ಡಿ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಮುಖ್ಯಮಂತ್ರಿಯಾಗಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ನಾಯಕರು ಮನಬಂದಂತೆ ಟೀಕಿಸುತ್ತಾರೆ. ಇದು ಅವರ ಸಂಸ್ಕ್ರತಿಯನ್ನು ತೋರಿಸುತ್ತದೆ ಎಂದು ತಿರುಗೇಟು ನೀಡಿದ್ದಾರೆ.
 
ಯಡಿಯೂರಪ್ಪ, ಸಿಎಂ ಸಿದ್ದರಾಮಯ್ಯರನ್ನು ಬಚ್ಚಾ ಎನ್ನುತ್ತಾರೆ. ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ವೋಟಿಗಾಗಿ ಸಿಎಂ ಬೂಟು ನೆಕ್ತಾರೆ ಎನ್ನುವಂತಹ ಕೀಳು ಮಾತುಗಳನ್ನಾಡುತ್ತಾರೆ. ಇಂತಹ ನಾಯಕರಿಂದ ಮತ್ತೇನು ನಿರೀಕ್ಷಿಸಲು ಸಾಧ್ಯ ಎಂದು ಕಿಡಿಕಾರಿದರು.
 
ಸಿಎಂ ಸಿದ್ದರಾಮಯ್ಯ ರೈತರ ಸಾಲ ಮನ್ನಾ ಮಾಡಿದಲ್ಲಿ ಕೇಂದ್ರ ಸರಕಾರದಿಂದ ಸಾಲ ಮನ್ನಾ ಮಾಡುತ್ತೇವೆ ಎಂದಿದ್ದ ಯಡಿಯೂರಪ್ಪ, ಇದೀಗ ಯಾಕೆ ಮೌನವಾಗಿದ್ದಾರೆ? ರೈತರ ಬಗ್ಗೆ ನಿಜವಾದ ಕಾಳಜಿಯಿದ್ದಲ್ಲಿ ಪ್ರಧಾನಿ ಮೋದಿ ಬಳಿಗೆ ತೆರಳಿ ರಾಜ್ಯದ ರೈತರ ಸಾಲ ಮನ್ನಾ ಮಾಡಿಸಲಿ ಎಂದು ಸವಾಲ್ ಹಾಕಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಸಹಾಯ ಕೇಳಲು ಬಂದ ಯುವತಿಗೆ ಲೈಂಗಿಕ ದೌರ್ಜನ್ಯ, ಕೋರ್ಟ್‌ಗೆ ಹಾಜರಾಗಲು ಬಿಎಸ್‌ವೈಗೆ ಸಮನ್ಸ್‌

ಸೂಸೈಡ್ ಬಾಂಬರ್ ದಾರಿ ತಪ್ಪಿದ ಮಗ: ಕಾಂಗ್ರೆಸ್ ಸಂಸದನ ಹೇಳಿಕೆ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments