Webdunia - Bharat's app for daily news and videos

Install App

ಕೇಂದ್ರ ಸಚಿವ ಹೆಗಡೆ ವಿರುದ್ಧ ಬಿಜೆಪಿ ನಾಯಕರೇ ಅಸಮಾಧಾನ

Webdunia
ಭಾನುವಾರ, 21 ಜನವರಿ 2018 (14:55 IST)
ಕನ್ನಡ ಪರ ಅವಹೇಳನಾಕಾರಿ ಹೇಳಿಕೆ ನೀಡುತ್ತಿರುವುದಲ್ಲದೇ ಕನ್ನಡ ಭಾಷೆಯ ಸಾಹಿತಿಗಳನ್ನು ಅವಮಾನಿಸುತ್ತಿರುವ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಬಿಜೆಪಿ ಮುಖಂಡರು ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪಗೆ ಒತ್ತಾಯಿಸಿದ್ದಾರೆ.
ಬಿಜೆಪಿ ಯುವಮೋರ್ಚಾ ರಾಜ್ಯಾಧ್ಯಕ್ಷ ಭೀಮಾಶಂಕರ್ ಪಾಟೀಲ್ ಮಾತನಾಡಿ, ದಿನಕ್ಕೊಂದು ಹೇಳಿಕೆ ನೀಡಿ ಬಿಜೆಪಿ ಪಕ್ಷವನ್ನು ಮುಜುಗರಗೊಳಪಡಿಸುತ್ತಿರುವ ಸಚಿವ ಹೆಗಡೆಯವರಿಗೆ ಬುದ್ದಿವಾದ ಹೇಳಿ ಎಂದು ಬಿಎಸ್‌ವೈಗೆ ಕೋರಿದ್ದಾರೆ.
 
ಸಂವಿಧಾನ ಬದಲಾವಣೆ, ನಂತರ ದಲಿತರನ್ನು ನಾಯಿಗಳಿಗೆ ಹೋಲಿಸಿರುವುದು ಕನ್ನಡ ಭಾಷೆ, ಕನ್ನಡ ರಾಜಮನೆತನಗಳನ್ನು ನಿಂದಿಸುತ್ತಿರುವುದು ಬಿಜೆಪಿ ಪಕ್ಷಕ್ಕೆ ಮುಂಬರುವ ಚುನಾವಣೆಯಲ್ಲಿ ತಿರುಗುಬಾಣವಾಗುವ ಸಾಧ್ಯತೆಗಳಿವೆ ಎಂದು ಯಡಿಯೂರಪ್ಪಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.
 
ನಾನು ಇನ್ನೂ ಭಾರತೀಯನಾಗಿರುವುದರಿಂದ ರಾಷ್ಟ್ರಭಾಷೆ ಹಿಂದಿಯಲ್ಲಿಯೇ ಮಾತನಾಡಲು ಇಚ್ಛಿಸುತ್ತೇನೆ ಎಂದು ಇಂಗ್ಲಿಷ್ ಭಾಷೆಯ ಕುರಿತು ಕೇಂದ್ರ ಸಚಿವ ಅನಂತ ಕುಮಾರ್ ಹೆಗಡೆ ಅಸಮಧಾನ ವ್ಯಕ್ತಪಡಿಸಿದ್ದಲ್ಲದೇ ಕನ್ನಡ ಭಾಷೆಯ ಬಗ್ಗೆ ಅಸಡ್ಡೆ ತೋರಿರುವುದು ಸರಿಯಲ್ಲ ಎಂದು ಬಿಜೆಪಿ ಯುವಮೋರ್ಚಾ ರಾಜ್ಯಾಧ್ಯಕ್ಷ ಭೀಮಾಶಂಕರ್ ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments