Webdunia - Bharat's app for daily news and videos

Install App

ಪಕ್ಷೇತರ ಕಾರ್ಪೋರೇಟರ್‌ಗಳನ್ನು ಬೈಯ್ದು ಹೊರಗಟ್ಟಿದ್ದ ಬಿಜೆಪಿ ನಾಯಕರು

Webdunia
ಸೋಮವಾರ, 31 ಆಗಸ್ಟ್ 2015 (21:25 IST)
ಬಿಬಿಎಂಪಿ ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಮೂವರು ಪಕ್ಷೇತರ ಕಾರ್ಪೋರೇಟರ್‌ಗಳು ಬಿಜೆಪಿ ಸೇರ್ಪಡೆಗೊಳ್ಳಲು ಬಿಜೆಪಿ ಕಚೇರಿಗೆ ಆಗಮಿಸಿದಾಗ ಅವರನ್ನು ಬಿಜೆಪಿ ನಾಯಕರು ಅವಮಾನಗೊಳಿಸಿ ಹೊರಗಟ್ಟಿರುವ ಸಂಗತಿ ಬಹಿರಂಗವಾಗಿದೆ.
 
ಕೋನೇನ ಅಗ್ರಹಾರ ಕಾರ್ಪೋರೇಟರ್ ಚಂದ್ರಪ್ಪ ರೆಡ್ಡಿ, ಮಾರತಹಳ್ಳಿ ಕಾರ್ಪೋರೇಟರ್ ಎನ್.ರಮೇಶ್ ಮತ್ತು ಎಸ್.ರಘು ಬಿಜೆಪಿ ಸೇರ್ಪಡೆಗಾಗಿ ಬಿಜೆಪಿ ನಾಯಕರ ದುಂಬಾಲು ಬಿದ್ದಿದ್ದರು ಎನ್ನಲಾಗಿದೆ.  
  
ಆದರೆ, ಬಿಜೆಪಿ ನಾಯಕರಾದ ಅರವಿಂದ್ ಲಿಂಬಾವಳಿ ,ಸಂಸದ ಪಿ.ಸಿ ಮೋಹನ್ ಸೇರಿದಂತೆ ಮತ್ತಿಬ್ಬರು ಬಿಜೆಪಿ ನಾಯಕರು ನೂತನ ಕಾರ್ಪೋರೇಟರ್‌ಗಳನ್ನು ಪಕ್ಷಕ್ಕೆ ಸೇರ್ಪಡೆಗೊಳಿಸಲು ವಿರೋಧಿಸಿದ್ದರು ಎಂದು ಮೂಲಗಳು ತಿಳಿಸಿವೆ. ನಮ್ಮ ಅನುಮತಿಯಿಲ್ಲದೇ ಪಕ್ಷೇತರರನ್ನು ಬಿಜೆಪಿಗೆ ಸೇರ್ಪಡೆಗೊಳಿಸಬಾರದು ಎಂದು ಖಡಾಖಂಡಿತವಾಗಿ ಹೇಳಿದ್ದರು ಎನ್ನಲಾಗಿದೆ.
 
ಬಿಜೆಪಿ ನಾಯಕರ ವರ್ತನೆಗೆ ಆಕ್ರೋಶಗೊಂಡ ಪಕ್ಷೇತರ ಶಾಸಕರು ಕಾಂಗ್ರೆಸ್ ಪಕ್ಷದ ಪಾಳಯಕ್ಕೆ ಜಿಗಿದಿದ್ದಾರೆ.
 
ಇದೀಗ ಬಹುಮತದ ಕೊರತೆ ಎದುರಿಸುತ್ತಿರುವ ಬಿಜೆಪಿಗೆ ತನ್ನದೇ ನಾಯಕರು ತೋರಿದ ವರ್ತನೆಯಿಂದ ಬಿಬಿಎಂಪಿ ಪಾಲಿಕೆಯಲ್ಲಿ ವಿರೋಧ ಪಕ್ಷದಲ್ಲಿ ಕೂರುವ ಪರಿಸ್ಥಿತಿ ಎದುರಾಗಿದೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments