Webdunia - Bharat's app for daily news and videos

Install App

ದಕ್ಷಿಣ ಭಾರತೀಯರನ್ನು ಕರಿಯರೆಂದು ಜರಿದ ಬಿಜೆಪಿ ನಾಯಕರು: ರಮ್ಯಾ ಆರೋಪ

Webdunia
ಮಂಗಳವಾರ, 16 ಮೇ 2017 (14:49 IST)
ದಕ್ಷಿಣ ಭಾರತೀಯರನ್ನು ಕರಿಯರೆಂದು ಕರೆದು ಅಪಮಾನ ಮಾಡಲಾಗುತ್ತಿದೆ. ಬಿಜೆಪಿ ನಾಯಕರು ಭಾರತೀಯರ ಬಗ್ಗೆ ಅಪಮಾನಕಾರಿ ಹೇಳಿಕೆ ನೀಡುತ್ತಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಮಾಜಿ ಸಂಸದೆ ರಮ್ಯಾ ಆರೋಪಿಸಿದ್ದಾರೆ.  
 
ಬರಪರಿಹಾರ ನೀಡುವಲ್ಲಿ ಕೇಂದ್ರ ಸರಕಾರ ತಾರತಮ್ಯ ಎಸಗಿದೆ. ಕೇಂದ್ರ ಸರಕಾರ ದಕ್ಷಿಣ ಭಾರತವನ್ನು ನಿರ್ಲಕ್ಷದಿಂದ ನೋಡುತ್ತಿದೆ. ತಮಿಳುನಾಡು ರೈತರು ಸಂಸತ್ತಿನ ಮುಂದೆ ಪ್ರತಿಭಟನೆ ನಡೆಸಿದರೂ ಕೇಂದ್ರ ಸರಕಾರ ಕ್ಯಾರೆ ಎನ್ನಲಿಲ್ಲ ಎಂದು ಗುಡುಗಿದರು. 
 
ಆಂಧ್ರ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡುವಂತೆ ನಡೆಸಿದ ಹೋರಾಟಕ್ಕೂ ಕೇಂದ್ರ ಕಿಮ್ಮತ್ತು ನೀಡಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. 
 
ಕೇರಳ ರಾಜ್ಯಕ್ಕೂ ಕೇಂದ್ರ ಸರಕಾರ ಮಲತಾಯಿ ಧೋರಣೆ ತೋರುತ್ತಿದೆ. ಮೂರು ವರ್ಷದಲ್ಲಿ ಅಸಹಿಷ್ಣುತೆಯ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ನರೇಗಾ ವಿತರಣೆಯಲ್ಲೂ ಕೇಂದ್ರ ಸರಕಾರ ದಕ್ಷಿಣ ಭಾರತವನ್ನು ವಂಚಿಸಿದೆ ಎಂದು ಮಾಜಿ ಸಂಸದೆ ನಟಿ, ರಮ್ಯಾ ಕೇಂದ್ರ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments