Select Your Language

Notifications

webdunia
webdunia
webdunia
webdunia

ಬಿಜೆಪಿ ನಾಯಕರು ರಮೇಶ್ ಜಾರಕಿಹೊಳಿ ಬ್ರೈನ್ ವಾಶ್ ಮಾಡಿದ್ದಾರೆ- ದಿನೇಶ್ ಗುಂಡೂರಾವ್

ಬಿಜೆಪಿ ನಾಯಕರು ರಮೇಶ್ ಜಾರಕಿಹೊಳಿ ಬ್ರೈನ್ ವಾಶ್ ಮಾಡಿದ್ದಾರೆ- ದಿನೇಶ್ ಗುಂಡೂರಾವ್
ಬೆಂಗಳೂರು , ಭಾನುವಾರ, 20 ಜನವರಿ 2019 (06:52 IST)
ಬೆಂಗಳೂರು : ಮೊದಲಿನಿಂದಲೂ ಕಾಂಗ್ರೆಸ್ ಪಕ್ಷದಲ್ಲಿ ಇದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಬಿಜೆಪಿ ನಾಯಕರು ಬ್ರೈನ್ ವಾಶ್ ಮಾಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ.


ರೆಸಾರ್ಟಿನಲ್ಲಿ ಏರ್ಪಡಿಸಿದ್ದ ಸಭೆಯ ಬಳಿಕ ಮಾತನಾಡಿದ ಅವರು, ‘ನಮ್ಮ ಶಾಸಕರ ವಿರುದ್ಧ ಬಿಜೆಪಿ ನಾಯಕರು ಕುತಂತ್ರ ನಡೆಸಿದ್ದಾರೆ. ಬಿಜೆಪಿ ಸರ್ಕಾರ ಹಾಗು ರಾಷ್ಟ್ರ ನಾಯಕರ ಸಹಾಯದಿಂದಲೇ ಕೃತ್ಯ ನಡೆದಿದೆ. ನಮ್ಮ ಶಾಸಕರಿಗೆ ಆಸೆ ತೋರಿಸಿ ಬ್ರೈನ್ ವಾಶ್ ಮಾಡಿದ್ದಾರೆ’ ಎಂದು ಆರೋಪಿಸಿದ್ದಾರೆ.


‘ಸಿಎಲ್‍ಪಿ ಸಭೆಗೆ ಗೈರಾದ ಶಾಸಕರಿಗೆ ನೋಟಿಸ್ ಜಾರಿ ಮಾಡಿದ್ದು, ಈಗಲೂ ರಮೇಶ್ ಜಾರಕಿಹೊಳಿ ಅವರು ಪಕ್ಷದಲ್ಲೇ ಮುಂದುವರಿಯುತ್ತಾರೆ ಎಂಬ ವಿಶ್ವಾಸವಿದೆ. ಏಕೆಂದರೆ ಅವರು 1999 ರಿಂದಲೂ ನನ್ನೊಂದಿಗೆ ಕಾರ್ಯ ನಿರ್ವಹಿಸಿದ್ದಾರೆ. ಆದ್ದರಿಂದ ಅವರ ಉತ್ತರಕ್ಕಾಗಿ ಕಾಯುತ್ತಿದ್ದೇವೆ. ಸೂಕ್ತ ಉತ್ತರ ನೀಡದಿದ್ದರೆ, ಪಕ್ಷ ಕ್ರಮಕೈಗೊಳ್ಳಲಿದೆ ಎಂದು ಅವರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಒಂಟಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿ ಚಿನ್ನಾಭರಣ ದೋಚಿಕೊಂಡು ಪರಾರಿಯಾದ ಕಾಮುಕ ಅರೆಸ್ಟ್