Webdunia - Bharat's app for daily news and videos

Install App

ಬಿಜೆಪಿಯವರು ಮಂಗಳೂರಿಗೆ ನಡೆದುಕೊಂಡು ಹೋಗಲಿ: ರಾಮಲಿಂಗಾರೆಡ್ಡಿ

Webdunia
ಸೋಮವಾರ, 4 ಸೆಪ್ಟಂಬರ್ 2017 (17:33 IST)
ನಾವು ವಿಪಕ್ಷದಲ್ಲಿದ್ದಾಗ ಬಳ್ಳಾರಿಗೆ ನಡೆದುಕೊಂಡು ಹೋಗಿದ್ದೇವೆ. ಅದರಂತೆ, ಬಿಜೆಪಿಯವರು ಕೂಡಾ ಮಂಗಳೂರಿಗೆ ನಡೆದುಕೊಂಡು ಹೋಗಲಿ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ಸಲಹೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಆಯೋಜಿಸಲಾದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಮಂಗಳೂರಿಗೆ ನಡೆದುಕೊಂಡು ಹೋದಲ್ಲಿ ಸಂಚಾರಿ ನಿಯಮಾವಳಿಗಳು ಅನ್ವಯವಾಗುವುದಿಲ್ಲ ಎಂದು ತಿಳಿಸಿದ್ದಾರೆ. 
 
ಬಿಜೆಪಿ ಯುವಮೋರ್ಚಾದವರು  ಬೈಕ್ ರ್ಯಾಲಿಯ ಬಗ್ಗೆ ಅನುಮತಿ ಕೇಳಿದ್ದಾರೆ. ಆಯಾ ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿಗಳು ಅನುಮತಿ ನೀಡುವ ಬಗ್ಗೆ ನಿರ್ಧರಿಸುತ್ತಾರೆ. ಎಷ್ಟು ಜನ ತೆರಳಲಿದ್ದಾರೆ? ಅವರ ಡ್ರೈವಿಂಗ್ ಲೈಸೆನ್ಸ್, ಮತ್ತಿತರ ಸಂಪೂರ್ಣ ವಿವರಗಳನ್ನು ನೀಡಬೇಕಾಗುತ್ತದೆ ಎಂದರು.
 
ಬೆಂಗಳೂರಿನಿಂದ ಬಳ್ಳಾರಿಯವರೆಗೆ ಕಾಂಗ್ರೆಸ್ ಪಕ್ಷ ಪಾದಯಾತ್ರೆ ಮೂಲಕ ತೆರಳಿ ಪ್ರತಿಭಟನೆ ನಡೆಸಿತ್ತು. ಅದರಂತೆ ಬಿಜೆಪಿಯವರು ಕೂಡಾ ಮಂಗಳೂರಿಗೆ ನಡೆದು ಹೋದರೆ ಸಮಸ್ಯೆ ಎದುರಾಗುವುದಿಲ್ಲ ಎಂದು ಗೃಹಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments