Webdunia - Bharat's app for daily news and videos

Install App

ಬಿಜೆಪಿಯ ನಾಯಕರಿಗೆ ಬುದ್ದಿ ಬೆಳೆದಿಲ್ಲ– ಮಾಜಿ ಸಚಿವ ಶ್ರೀನಿವಾಸ ಪ್ರಸಾದ್

Webdunia
ಶನಿವಾರ, 30 ಡಿಸೆಂಬರ್ 2017 (13:47 IST)
ಕಾಂಗ್ರೆಸ್ ವಿರುದ್ಧ ಮುನಿಸಿಕೊಂಡು ಬಿಜೆಪಿ ಸೇರಿದ್ದ ಮಾಜಿ ಸಚಿವ ವಿ. ಶ್ರೀನಿವಾಸ್‍ಪ್ರಸಾದ್ ಬಿಜೆಪಿ ನಾಯಕರ ವಿರುದ್ಧವೇ ಗುಡುಗಿದ್ದು, ಬಿಜೆಪಿಯ ನಾಯಕರಿಗೆ ಬುದ್ದಿ ಬೆಳೆದಿಲ್ಲ ಎಂದು ಹೇಳಿಕೆ ನೀಡಿದ್ದಾರೆ.
 
ಮೈಸೂರಿನಲ್ಲಿ ಮಾತನಾಡಿರುವ ಅವರು, ಸಂವಿಧಾನದ ಬಗ್ಗೆ ಅಪಸ್ವರ ಎತ್ತಿರುವ ಬಿಜೆಪಿ ನಾಯಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಗೋ. ಮಧುಸೂದನ್ ಅವರಿಗೆ ಇನ್ನೂ ಬುದ್ದಿ ಬೆಳೆದಿಲ್ಲ. ಅನಾವಶ್ಯಕವಾಗಿ ಸಂವಿಧಾನದ ಬಗ್ಗೆ ಮಾತನಾಡುತ್ತಾನೆ. ಇಂತವರು ಪಕ್ಷದ ವಕ್ತಾರರಾಗುತ್ತಾರೆ ಎಂದು ಕಿಡಿ ಕಾರಿದರು.
 
ಎರಡು ಬಾರಿ ಎಂಎಲ್‍ಸಿ ಆಗಿರುವ ಗೋ.ಮಧುಸೂದನ್ ಅವರನ್ನು ಎಲ್ಲರೂ ಗೋ ಅನ್ನುತ್ತಾರೆ, ಕಮ್ ಅನ್ನೋದಿಲ್ಲಾ ಎಂದ ಅವರು ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಅವರು ಮೋದಿ ಸರ್ಕಾರದಲ್ಲಿ ಮಂತ್ರಿಯಾಗಿರುವುದು ಅವಮಾನ ಎಂದಿದ್ದಾರೆ. ಸಂವಿಧಾನದ ಬಗ್ಗೆ ಪೇಜಾವರ ಶ್ರೀ ನೀಡಿರುವ ಹೇಳಿಕೆ ಖಂಡನೀಯ. ಮಠಾಧಿಪತಿಗಳು ಮಠದ ಕಾರ್ಯಗಳನ್ನು ಮಾಡಬೇಕು. ಉಳಿದೆಲ್ಲ ಕೆಲಸವನ್ನು ಮಾಡಬಾರದು ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments