Webdunia - Bharat's app for daily news and videos

Install App

ಬಿಜೆಪಿಯವರು ಅಧಿಕಾರಕ್ಕೆ ಬರುವ ಕನಸು ಕಾಣುತ್ತಿದ್ದಾರೆ: ಕುಮಾರಸ್ವಾಮಿ

Webdunia
ಗುರುವಾರ, 23 ಮಾರ್ಚ್ 2017 (15:45 IST)
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯವರು ಅಧಿಕಾರಕ್ಕೆ ಬರುವ ಕನಸು ಕಾಣುತ್ತಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ.
 
ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಪಕ್ಷದ ಸಮಾವೇಶದಲ್ಲಿ ಮಾತನಾಡಿದ ಅವರು,  ಏ.9 ರಂದು ನಡೆಯಲಿರುವ ನಂಜನಗೂಡು, ಗುಂಡ್ಲುಪೇಟೆ ಉಪಚುನಾವಣೆಯಲ್ಲಿ ನಾವು ಅಭ್ಯರ್ಥಿಗಳನ್ನು ಹಾಕಿಲ್ಲ. ಯಾವುದೇ ಪಕ್ಷವನ್ನು ಬೆಂಬಲಿಸುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.
 
ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ಲೂಟಿ ಮಾಡಿದ ಪಾಪದ ಹಣವನ್ನು ಚುನಾವಣೆಯಲ್ಲಿ ವೆಚ್ಚ ಮಾಡುತ್ತಿವೆ. ಆದ್ದರಿಂದ ಉಪಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ಹಾಕಲಿಲ್ಲ. ಉಪಚುನಾವಣೆಗಳಲ್ಲಿ ಜೆಡಿಎಸ್ ಹಲವು ಬಾರಿ ಜಯಗಳಿಸಿದೆ ಎನ್ನುವುದು ಮರೆಯುವಂತಿಲ್ಲ ಎಂದರು. ಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿ ಪಾಪದ ಹಣ ಬಳಕೆ ಮಾಡುತ್ತಿವೆ ಎಂದು ಎರಡು ಕ್ಷೇತ್ರಗಳ ಕಾರ್ಯಕರ್ತರೇ ನನಗೆ ಈ ಮಾಹಿತಿ ನೀಡಿದ್ದಾರೆ ಎಂದರು 
 
ಮುಂದಿನ ಹತ್ತು ತಿಂಗಳು ಕಾರ್ಯಕರ್ತರಿಗೆ ಅಗ್ನಿಪರೀಕ್ಷೆಯಾಗಿರಲಿದೆ. ಅತಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಸಮಾವೇಶದಲ್ಲಿ ಪಾಲ್ಗೊಂಡಿದ್ದರಿಂದ ಇಂದಿನ ಕಾರ್ಯಕ್ರಮ ನನಗೆ ಸ್ಪೂರ್ತಿ ತಂದಿದೆ.
 
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಅತ್ಯಧಿಕ ಸ್ಥಾನ ಗಳಿಸಿ ಅಧಿಕಾರಕ್ಕೆ ಬರುವುದು ಖಚಿತ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುರ್ಜೇವಾಲ ಮೀಟಿಂಗ್ ಬಗ್ಗೆ ಕಾಂಗ್ರೆಸ್ ನೊಳಗೇ ಅಸಮಾಧಾನ

ಸಚಿವರ ಭೇಟಿ ಬಳಿಕ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಜೊತೆ ಸುರ್ಜೇವಾಲ ಮೀಟಿಂಗ್

ಶಾಸಕ ವಿ ಸುನಿಲ್ ಕುಮಾರ್ ಗೆ ಪಿತೃ ವಿಯೋಗ

Karnataka Weather: ಎರಡು ದಿನ ಭಾರೀ ಮಳೆ, ಕರಾವಳಿಗೆ ಇಂದೂ ಮಳೆಯಿರುತ್ತಾ ನೋಡಿ

ಸಂಸತ್‌ ಕ್ಯಾಂಟೀನ್‌ನಲ್ಲಿ ಪೌಷ್ಟಿಕಾಂಶಯುಕ್ತ ಆಹಾರ, ಮೆನುವಿನಲ್ಲಿ ಭಾರೀ ಬದಲಾವಣೆ ತಂದ ಸ್ಪೀಕರ್‌

ಮುಂದಿನ ಸುದ್ದಿ
Show comments