Select Your Language

Notifications

webdunia
webdunia
webdunia
webdunia

ಬಿಜೆಪಿ ನಾಯಕರು ಜೈಲುವಾಸ ಮಾಡಿ ಬಂದಿದ್ದಾರೆ: ರಾಯರೆಡ್ಡಿ

ಬಿಜೆಪಿ ನಾಯಕರು ಜೈಲುವಾಸ ಮಾಡಿ ಬಂದಿದ್ದಾರೆ: ರಾಯರೆಡ್ಡಿ
ಕೊಪ್ಪಳ , ಶನಿವಾರ, 27 ಮೇ 2017 (17:47 IST)
ಬಿಜೆಪಿ ನಾಯಕರು ಜೈಲು ವಾಸ ಮಾಡಿ ಬಂದಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪರಿಗೆ ಅವರ ಮಾತಿನ ಮೇಲೆ ಹಿಡಿತವಿಲ್ಲ ಎಂದು ಉನ್ನತ ಶಿಕ್ಷಣ ಖಾತೆ ಸಚಿವ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ.
 
ರಾಜ್ಯ ಸರಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ ಎನ್ನುವ ಆರೋಪಗಳನ್ನು ವಿಪಕ್ಷಗಳು ಮಾಡುತ್ತಿವೆ. ಒಂದು ವೇಳೆ, ಆರೋಪಗಳು ನಿಜವಾಗಿದ್ದಲ್ಲಿ ನ್ಯಾಯಾಲಯಕ್ಕೆ ಹೋಗಲಿ. ಕಾಂಗ್ರೆಸ್ ಪಕ್ಷದಲ್ಲಿ ಭ್ರಷ್ಟರು ಯಾರೂ ಇಲ್ಲ ಎಂದು ತಿರುಗೇಟು ನೀಡಿದ್ದಾರೆ.
 
ಸೂಕ್ತ ದಾಖಲೆಗಳಿಲ್ಲದೆ ಆರೋಪ ಮಾಡುವುದು ಸರಿಯಲ್ಲ. ಆರೋಪ ಮಾಡಿದ್ದೇ ಆದಲ್ಲಿ ಅದಕ್ಕೆ ಸೂಕ್ತ ದಾಖಲೆಗಳನ್ನು ನೀಡಬೇಕು. ಕೇವಲ ಆರೋಪಗಳನ್ನು ಮಾಡಿ ಪರಾರಿಯಾಗುವುದು ಸರಿಯಲ್ಲ ಎಂದು ಬಿಜೆಪಿ ನಾಯಕರಿಗೆ ಕಿವಿಮಾತು ಹೇಳಿದ್ದಾರೆ.
 
ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರ ಪಾರದರ್ಶಕತೆಯಿಂದ ಕಾರ್ಯನಿರ್ವಹಿಸುತ್ತಿದೆ. ರೈತಪರ, ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ.ಬರಗಾಲ ನಿರ್ವಹಣೆಯಲ್ಲೂ ಉತ್ತಮವಾಗಿ ಕೆಲಸ ಮಾಡಿದೆ. ವಿಪಕ್ಷಗಳು ಹೊಟ್ಟೆಕಿಚ್ಚಿನಿಂದ ಸರಕಾರ ಮೇಲೆ ಆರೋಪಗಳನ್ನು ಮಾಡುತ್ತಿವೆ ಎಂದು ಉನ್ನತ ಶಿಕ್ಷಣ ಖಾತೆ ಸಚಿವ ಬಸವರಾಜ ರಾಯರೆಡ್ಡಿ ಗುಡುಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಹೈಟೆಕ್ ಸೆಕ್ಸ್ ರಾಕೆಟ್ : ಐವರು ಆರೋಪಿಗಳ ಬಂಧನ