Webdunia - Bharat's app for daily news and videos

Install App

ಬಿಜೆಪಿ ನಾಯಕರು ಜೈಲುವಾಸ ಮಾಡಿ ಬಂದಿದ್ದಾರೆ: ರಾಯರೆಡ್ಡಿ

Webdunia
ಶನಿವಾರ, 27 ಮೇ 2017 (17:47 IST)
ಬಿಜೆಪಿ ನಾಯಕರು ಜೈಲು ವಾಸ ಮಾಡಿ ಬಂದಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪರಿಗೆ ಅವರ ಮಾತಿನ ಮೇಲೆ ಹಿಡಿತವಿಲ್ಲ ಎಂದು ಉನ್ನತ ಶಿಕ್ಷಣ ಖಾತೆ ಸಚಿವ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ.
 
ರಾಜ್ಯ ಸರಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ ಎನ್ನುವ ಆರೋಪಗಳನ್ನು ವಿಪಕ್ಷಗಳು ಮಾಡುತ್ತಿವೆ. ಒಂದು ವೇಳೆ, ಆರೋಪಗಳು ನಿಜವಾಗಿದ್ದಲ್ಲಿ ನ್ಯಾಯಾಲಯಕ್ಕೆ ಹೋಗಲಿ. ಕಾಂಗ್ರೆಸ್ ಪಕ್ಷದಲ್ಲಿ ಭ್ರಷ್ಟರು ಯಾರೂ ಇಲ್ಲ ಎಂದು ತಿರುಗೇಟು ನೀಡಿದ್ದಾರೆ.
 
ಸೂಕ್ತ ದಾಖಲೆಗಳಿಲ್ಲದೆ ಆರೋಪ ಮಾಡುವುದು ಸರಿಯಲ್ಲ. ಆರೋಪ ಮಾಡಿದ್ದೇ ಆದಲ್ಲಿ ಅದಕ್ಕೆ ಸೂಕ್ತ ದಾಖಲೆಗಳನ್ನು ನೀಡಬೇಕು. ಕೇವಲ ಆರೋಪಗಳನ್ನು ಮಾಡಿ ಪರಾರಿಯಾಗುವುದು ಸರಿಯಲ್ಲ ಎಂದು ಬಿಜೆಪಿ ನಾಯಕರಿಗೆ ಕಿವಿಮಾತು ಹೇಳಿದ್ದಾರೆ.
 
ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರ ಪಾರದರ್ಶಕತೆಯಿಂದ ಕಾರ್ಯನಿರ್ವಹಿಸುತ್ತಿದೆ. ರೈತಪರ, ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ.ಬರಗಾಲ ನಿರ್ವಹಣೆಯಲ್ಲೂ ಉತ್ತಮವಾಗಿ ಕೆಲಸ ಮಾಡಿದೆ. ವಿಪಕ್ಷಗಳು ಹೊಟ್ಟೆಕಿಚ್ಚಿನಿಂದ ಸರಕಾರ ಮೇಲೆ ಆರೋಪಗಳನ್ನು ಮಾಡುತ್ತಿವೆ ಎಂದು ಉನ್ನತ ಶಿಕ್ಷಣ ಖಾತೆ ಸಚಿವ ಬಸವರಾಜ ರಾಯರೆಡ್ಡಿ ಗುಡುಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನಗಳಲ್ಲಿ ಯಾಕೆ ಹೀಗಾಗುತ್ತಿದೆ, ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶವಾಯಿತು ಇಂಡಿಗೋ ವಿಮಾನ

ಯೋಗ ಜಗತ್ತನ್ನು ಒಂದುಗೂಡಿಸುತ್ತದೆ: ಪ್ರಧಾನಿ ನರೇಂದ್ರ ಮೋದಿ

ಸೊಸೆಯನ್ನು ತಾನೇ ಕೊಂದು, ನಾಪತ್ತೆ ನಾಟಕವಾಡಿದ್ದ ಮಾವ ಕೊನೆಗೂ ಅರೆಸ್ಟ್‌

ಇರಾನ್‌ನಿಂದ 290 ಭಾರತೀಯ ವಿದ್ಯಾರ್ಥಿಗಳು ಭಾರತಕ್ಕೆ ವಾಪಾಸ್‌, ಮೂರು ಹಂತದಲ್ಲಿ ಕಾರ್ಯಚರಣೆ

ಇಸ್ರೇಲ್‌ನಲ್ಲಿರುವ ಭಾರತೀಯರು ತಾಯ್ನಾಡಿಗೆ ವಾಪಾಸ್ಸಾಗಬೇಕೇ, ಸರ್ಕಾರ ಏನ್ ಹೇಳ್ತಿದೆ

ಮುಂದಿನ ಸುದ್ದಿ
Show comments