Webdunia - Bharat's app for daily news and videos

Install App

'ಬಿಜೆಪಿಗೆ ನಾಯಕರಿಗೆ ಇತಿಹಾಸ ಜ್ಞಾನವೇ ಇಲ್ಲ'

Webdunia
ಶನಿವಾರ, 14 ಆಗಸ್ಟ್ 2021 (10:26 IST)
ಬೆಂಗಳೂರು (ಆ.14):  ಇತಿಹಾಸದ ಬಗ್ಗೆ ಕನಿಷ್ಠ ಜ್ಞಾನವೂ ಬಿಜೆಪಿ ನಾಯಕರಿಗೆ ಇಲ್ಲ. ಇದ್ದಿದ್ದರೆ ದೇಶಕ್ಕಾಗಿ ಪ್ರಾಣ ತೆತ್ತವರ ಬಗ್ಗೆ ಹಗುರವಾಗಿ ಮಾತನಾಡುತ್ತಿರಲಿಲ್ಲ. ಈ ಬಿಜೆಪಿಯವರು ಇತಿಹಾಸ ತಿರುಚುವುದರಲ್ಲಿ, ಸುಳ್ಳು ಹೇಳಿ ಸಮಾಜದ ದಾರಿ ತಪ್ಪಿಸುವುದರಲ್ಲಿ ಪ್ರವೀಣರು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಚೌಡಯ್ಯ ಮೆಮೋರಿಯಲ್ ಹಾಲ್ನಲ್ಲಿ ಶುಕ್ರವಾರ ಏರ್ಪಡಿಸಿದ್ದ ಯುವ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯ ಅವರ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಇಂದಿರಾ ಗಾಂಧಿ ಕುರಿತ ಬಿಜೆಪಿ ನಾಯಕ ಸಿ.ಟಿ.ರವಿ ಹೇಳಿಕೆಗಳನ್ನು ಉಲ್ಲೇಖಿಸಿ ಮಾತನಾಡಿದ ಅವರು, ರವಿಗೆ ಇತಿಹಾಸದ ಜ್ಞಾನ ಇಲ್ಲ. ಸಚಿವ ಕೆ.ಎಸ್.ಈಶ್ವರಪ್ಪ ಬಾಯಿ ತೆಗೆದರೆ ಹೊಲಸು ಮಾತನಾಡುತ್ತಾರೆ. ಇದೇನಾ ಬಿಜೆಪಿಯವರ ಸಂಸ್ಕಾರ, ಸಂಸ್ಕೃತಿ? ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಮಾಡಿದ, ಬಲಿದಾನಗೈದ ಇತಿಹಾಸ ಇರುವುದು ಕೇವಲ ಕಾಂಗ್ರೆಸ್ಗೆ ಮಾತ್ರ. ಈ ಆರ್ಎಸ್ಎಸ್ ಹಾಗೂ ಬಿಜೆಪಿಯ ಹಿಂದಿನ ತಲೆಮಾರಿನವರು ಮೊಘಲರು ಹಾಗೂ ಬ್ರಿಟಿಷರ ಆಸ್ಥಾನದಲ್ಲಿ ಪ್ರಮುಖ ಹುದ್ದೆಯಲ್ಲಿದ್ದವರು ಎಂದು ವ್ಯಂಗ್ಯವಾಡಿದರು.
ಈ ಆರ್ಎಸ್ಎಸ್ನವರು ಟಿಪ್ಪು ಸುಲ್ತಾನನನ್ನು ದ್ವೇಷಿಸುತ್ತಾರೆ. ಆದರೆ, ಟಿಪ್ಪುವಿನ ಆಸ್ಥಾನದಲ್ಲಿ ದಿವಾನರಾಗಿದ್ದವರು ಪೂರ್ಣಯ್ಯ, ಹಣಕಾಸು ಸಚಿವ ಕೃಷ್ಣಸ್ವಾಮಿಯವರು. ಇವರನ್ನು ಏಕೆ ಏಕೆ ವಿರೋಧ ಮಾಡುವುದಿಲ್ಲ ಎಂದು ಪ್ರಶ್ನಿಸಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments