Select Your Language

Notifications

webdunia
webdunia
webdunia
webdunia

ಬಿಜೆಪಿ ನಾಯಕರಿಗೆ ಎರಡು ನಾಲಿಗೆ, ಗಳಿಗೆಗೊಂದು ಬಣ್ಣ: ಸಿಎಂ ಸಿದ್ದರಾಮಯ್ಯ

ಬೆಂಗಳೂರು ಕಾಲ್ತುಳಿತ

Sampriya

ಬೆಂಗಳೂರು , ಸೋಮವಾರ, 9 ಜೂನ್ 2025 (15:17 IST)
ಬೆಂಗಳೂರು: ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗಡೆ ನಡೆದ ಕಾಲ್ತುಳಿತ ದುರಂತ ಸಂಬಂಧ ಪೊಲೀಸ್‌ ಕಮಿಷನರ್‌ ಒಬ್ಬರ ಮೇಲೆ ಮಾತ್ರವೇ ಕ್ರಮ ಕೈಗೊಂಡಿಲ್ಲ, ಇನ್ನೂ 5 ಮಂದಿ ಪೊಲೀಸರನ್ನು ಅಮಾನತು ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡಿದರು. 

ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸ್‌ ಇಲಾಖೆಯ ವಿರುದ್ಧ ಹಲವು ಬಾರಿ ಪ್ರತಿಭಟನೆ ಮತ್ತು ಆರೋಪ ಮಾಡುತ್ತಿದ್ದ ಬಿಜೆಪಿ ಮತ್ತು ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ಈಗ ಇದ್ದಕ್ಕಿದ್ದಂತೆ ಪೊಲೀಸರ ಮೇಲೆ ಪ್ರೀತಿ ಬಂದಿದೆ.

ಮೇಲ್ನೋಟಕ್ಕೆ ಯಾರೆಲ್ಲಾ ತಪ್ಪಿತಸ್ಥರಿದ್ದಾರೆ ಅವರೆಲ್ಲರ ವಿರುದ್ಧ ಕ್ರಮ ಜರುಗಿಸಿದ್ದೇವೆ. ವಿಪಕ್ಷಗಳು ಒತ್ತಾಯ ಮಾಡಿದಂತೆ ನ್ಯಾಯಾಂಗ ತನಿಖೆಗೂ ವಹಿಸಿದ್ದೇವೆ. ಆದರೆ ಅವರು ಇನ್ನೂ ಇದೇ ವಿಷಯದಲ್ಲಿ ರಾಜಕೀಯ ಮಾಡುತ್ತಾ ಕೂತಿದ್ದಾರೆ.

ಬಿಜೆಪಿ ನಾಯಕರಿಗೆ ಎರಡು ನಾಲಿಗೆ, ಗಳಿಗೆಗೊಂದು ಬಣ್ಣ. ಆರ್‌ಸಿಬಿ ವಿಜಯಯಾತ್ರೆಗೆ ಅವಕಾಶ ನೀಡದಿದ್ದಕ್ಕೆ ಸರ್ಕಾರವನ್ನು ಟೀಕಿಸಿದ ಬಿಜೆಪಿ, ಒಂದು ವೇಳೆ ವಿಧಾನಸೌಧದ ಎದುರು ಆರ್‌ಸಿಬಿ ಆಟಗಾರರನ್ನು ಸನ್ಮಾನಿಸದೆ ಇದ್ದಿದ್ದರೆ ಇನ್ನೊಂದು ರೀತಿ ಟೀಕೆ ಮಾಡುತ್ತಿದ್ದರು. ಅವರ ವರಸೆ ಸಂದರ್ಭಕ್ಕೆ ತಕ್ಕಂತೆ ಬದಲಾಗುತ್ತೆ.


Share this Story:

Follow Webdunia kannada

ಮುಂದಿನ ಸುದ್ದಿ

Indore murder: ಖತರ್ನಾಕ್ ಸೋನಮ್ ರಘುವಂಶಿ ಲವ್ವರ್ ಫೋಟೋ ರಿವೀಲ್: ಇವನಿಗಾಗಿ ಇಷ್ಟೆಲ್ಲಾ ಮಾಡಿದ್ಳಾ