Select Your Language

Notifications

webdunia
webdunia
webdunia
webdunia

ಬಿಎಸ್ ಯಡಿಯೂರಪ್ಪ ನಿವಾಸದಲ್ಲಿ ಸಭೆ ಸೇರಿರುವ ಬಿಜೆಪಿ ನಾಯಕರು

ಬಿಎಸ್ ಯಡಿಯೂರಪ್ಪ ನಿವಾಸದಲ್ಲಿ ಸಭೆ ಸೇರಿರುವ ಬಿಜೆಪಿ ನಾಯಕರು
ಬೆಂಗಳೂರು , ಶನಿವಾರ, 22 ಸೆಪ್ಟಂಬರ್ 2018 (11:57 IST)
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರ ಡಾಲರ್ಸ್ ಕಾಲೊನಿ ನಿವಾಸದಲ್ಲಿ ಬಿಜೆಪಿ ನಾಯಕರು ಸಭೆ ನಡೆಸುತ್ತಿದ್ದು, ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ.

ಇತ್ತೀಚೆಗೆ ಬಿಜೆಪಿ ವಿರುದ್ಧ ಸಿಎಂ ಕುಮಾರಸ್ವಾಮಿ ದಂಗೆ ಏಳಲು ಕರೆ ಕೊಡುತ್ತೆನೆ ಎಂದು ನೀಡಿದ್ದ ಹೇಳಿಕೆ ವಿಚಾರ ಪ್ರಮುಖವಾಗಿ ಸಭೆಯಲ್ಲಿ ಚರ್ಚೆಯಾಗುತ್ತಿದೆ. ಈ ಹೇಳಿಕೆಯ ರಾಜಕೀಯ ಲಾಭ ಪಡೆಯುವುದರ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ.

ಸಭೆಯಲ್ಲಿ ಬಿಎಸ್ ವೈ ಜತೆಗೆ ಶೋಭಾ ಕರಂದ್ಲಾಜೆ, ಅಯನೂರು ಮಂಜುನಾಥ್, ಬಿವೈ ರಾಘವೇಂದ್ರ ಸೇರಿದಂತೆ ಪ್ರಮುಖ ನಾಯಕರು ಭಾಗಿಯಾಗಿದ್ದಾರೆ. ಈ ನಡುವೆ ದಂಗೆ ಹೇಳಿಕೆ ಕುರಿತಂತೆ ಬಿಜೆಪಿ ರಾಜ್ಯಾಪಾಲರಿಗೆ ದೂರು ನೀಡಿರುವ ವರದಿಯನ್ನು ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರ್ ರಾವ್ ಗೆ ಸಲ್ಲಿಸುವ ಮೂಲಕ ಹೈಕಮಾಂಡ್ ಗಮನಕ್ಕೆ ತಂದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

Share this Story:

Follow Webdunia kannada

ಮುಂದಿನ ಸುದ್ದಿ

ಬಿಎಸ್ ಎಫ್ ಯೋಧನನ್ನು ಕೊಂದಿದ್ದ ನಾವಲ್ಲ: ಪಾಕ್ ಪ್ರಧಾನಿ ಇಮ್ರಾನ್ ಖಾನ್ ವರಸೆ