Webdunia - Bharat's app for daily news and videos

Install App

ಮಹದಾಯಿ ವಿವಾದ: ಮಹಾರಾಷ್ಟ್ರ ಸಿಎಂ ಭೇಟಿಯಾದ ಬಿಜೆಪಿ ನಾಯಕರು

Webdunia
ಬುಧವಾರ, 12 ಅಕ್ಟೋಬರ್ 2016 (18:44 IST)
ಮಹದಾಯಿ ವಿವಾದಕ್ಕೆ ಸಂಬಂಧಿಸಿದಂತೆ ಮೂರು ರಾಜ್ಯದ ಸಿಎಂಗಳ ಸಭೆ ಕರೆದಿರುವ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ನಾಯಕರು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿ ಮಾಡಿ ಚರ್ಚಿಸಿದರು. 
 
ಇಂದು ಮುಂಬೈನಲ್ಲಿ ಕೇಂದ್ರ ಸಚಿವ ಅನಂತ್‌ಕುಮಾರ್, ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಹಾಗೂ ಪ್ರಹ್ಲಾದ್ ಜೋಷಿ ಅವರು ದೇವೇಂದ್ರ ಫಡ್ನಾವೀಸ್ ಅವರ ಜೊತೆ ಸುಮಾರು 1 ಗಂಟೆಗಳ ಕಾಲ ಚರ್ಚೆ ನಡೆಸಿ, ರಾಜ್ಯದಲ್ಲಿರುವ ನೀರಿನ ಅಭಾವದ ಕುರಿತು ಮನವರಿಕೆ ಮಾಡಿಕೊಟ್ಟರು. 
 
ಮಹದಾಯಿ ನದಿ ನೀರು ಹಂಚಿಕೆ ವಿವಾದವನ್ನು ಸೌಹಾರ್ದಯುತವಾಗಿ ಪರಿಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಕೇಂದ್ರ ಸಚಿವ ಅನಂತ್‌ಕುಮಾರ್ ನಿಯೋಗ ದೇವೇಂದ್ರ ಫಡ್ನಾವೀಸ್ ಬಳಿ ಮನವಿ ಮಾಡಿದೆ. 
 
ಮಹದಾಯಿ ನೀರನ್ನು ಕೇವಲ ಕುಡಿಯುವ ನೀರಿಗಾಗಿ ಬಳಸಿಕೊಳ್ಳಲಾಗುತ್ತದೆ. ಕೃಷಿ ಚಟುವಟಿಕೆಗಳಿಗೆ ಬಳಸಿಕೊಳ್ಳಲಾಗುವುದಿಲ್ಲ. ಹೀಗಾಗಿ ಯೋಜನೆಗೆ ಅಡ್ಡಿಪಡಿಸದಂತೆ ಕೋರಿ ಮನವಿ ಮಾಡಲಾಗಿದೆ. ಈಗಾಗಲೇ ಈ ಕುರಿತು ಗೋವಾ ಮುಖ್ಯಮಂತ್ರಿ ಲಕ್ಷ್ಮೀ ಪರ್ಸೇಕರ್ ಅವರ ಜೊತೆಯೂ ಚರ್ಚಿಸಲಾಗಿದೆ ಎಂದು ಹೇಳಿದರು. 
 
ಮಹದಾಯಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 21 ರಂದು ಮುಂಬೈನಲ್ಲಿ ಸಭೆ ಕರೆದಿರುವುದು ಸ್ವಾಗತಾರ್ಹ. ಈ ಮಹತ್ವದ ಸಭೆಯಿಂದ ಮಹದಾಯಿ ವಿವಾದ ಇತ್ಯರ್ಥವಾಗಲಿದೆ ಎಂದು ಬಿಜೆಪಿ ನಿಯೋಗ ವಿಶ್ವಾಸ ವ್ಯಕ್ತಪಡಿಸಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದು ಸೇವೆಗಾಗಿ ಬಂದ ಕಾಂಗ್ರೆಸ್ ಅಲ್ಲ, ವ್ಯಾಪಾರಕ್ಕಾಗಿ ಬಂದಿದ್ದು: ಛಲವಾದಿ ನಾರಾಯಣಸ್ವಾಮಿ

ಸಾಲಗಾರನ ಮಗಳನ್ನು ಕರೆದೊಯ್ದ ಪ್ರಕರಣ: ಆರೋಪಿ ಅರೆಸ್ಟ್‌

ನನ್ನ ಶೂ ನೆಕ್ಕಲು ಸಹ ಅರ್ಹನಲ್ಲ: ಅಧಿಕಾರಿಗಳ ವಿರುದ್ಧ ಜಾತಿ ನಿಂದನೆ ದೂರು ಕೊಟ್ಟ ಇಂಡಿಗೋ ಸಿಬ್ಬಂದಿ

ಜಮ್ಮುನಲ್ಲಿ ಲ್ಯಾಂಡಿಂಗ್‌ ಆಗಬೇಕಿದ್ದ ಏರ್‌ ಇಂಡಿಯಾ ವಿಮಾನ ದೆಹಲಿಗೆ ವಾಪಸ್‌: ಕಾರಣ ನಿಗೂಢ

ಬೆಂಗಳೂರಿನಲ್ಲಿ ಏನಾಗುತ್ತಿದೆ, ಯುವತಿಗೆ ಹಾಡಹಗಲೇ ಮೈಕೈ ಮುಟ್ಟಿ ಲೈಂಗಿಕ ಕಿರುಕುಳ

ಮುಂದಿನ ಸುದ್ದಿ
Show comments