Webdunia - Bharat's app for daily news and videos

Install App

ನಿಮಗ್ಯಾಕೆ ಕೊಡಬೇಕು ಟಿಕೆಟ್? ಡಿವಿ ಸದಾನಂದ ಗೌಡಗೆ ಹೈಕಮಾಂಡ್ ಪ್ರಶ್ನೆ

Krishnaveni K
ಮಂಗಳವಾರ, 12 ಮಾರ್ಚ್ 2024 (10:58 IST)
Photo Courtesy: facebook
ಬೆಂಗಳೂರು: ರಾಜಕೀಯ ನಿವೃತ್ತಿಯಾಗುತ್ತೇನೆಂದು ಹೇಳಿಕೊಂಡಿದ್ದು ಬಿಜೆಪಿ ಸಂಸದ ಡಿವಿ ಸದಾನಂದ ಗೌಡ ಈಗ ಬೆಂಗಳೂರು ಉತ್ತರ ಕ್ಷೇತ್ರದಿಂದ ಮತ್ತೊಮ್ಮೆ ಟಿಕೆಟ್ ನೀಡುವಂತೆ ಬೇಡಿಕೆಯಿಟ್ಟಿದ್ದಾರೆ. ಇದಕ್ಕೆ ಬಿಜೆಪಿ ಹೈಕಮಾಂಡ್ ತಕರಾರು ತೆಗೆದಿದೆ.

ಮತ್ತೊಮ್ಮೆ ಚುನಾವಣೆಯಲ್ಲಿ ಸ್ಪರ್ಧಿಸುವ ಇರಾದೆ ಇದ್ದರೆ ರಾಜಕೀಯ ನಿವೃತ್ತಿಯಾಗುತ್ತೇನೆ, ಚುನಾವಣೆಗೆ ನಿಲ್ಲಲ್ಲ ಎಂದು ಹೇಳಿಕೊಂಡು ಬಂದಿದ್ದೇಕೆ ಎಂದು ಬಿಜೆಪಿ ಹೈಕಮಾಂಡ್ ಪ್ರಶ್ನೆ ಮಾಡಿದೆ. ಈ ಮೊದಲು ಡಿವಿ ಸದಾನಂದ ಗೌಡ ನಾನು ಇನ್ನು ಮುಂದೆ ಚುನಾವಣೆಗೆ ಸ್ಪರ್ಧಿಸಲ್ಲ. ಯುವಕರಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ಹಿಂದೆ ಸರಿಯುವುದಾಗಿ ಹೇಳಿದ್ದರು. ಅವರ ಆ ಹೇಳಿಕೆ ಈಗ ಅವರಿಗೇ ಮುಳುವಾಗಿದೆ.

ಹಿಂದೆ ಆ ರೀತಿ ಹೇಳಿಕೆ ನೀಡಿ ಈಗ ಟಿಕೆಟ್ ಗೆ ಬೇಡಿಕೆಯಿಟ್ಟಿರುವುದು ಯಾಕೆ ಎಂದು ಹೈಕಮಾಂಡ್ ಪ್ರಶ್ನೆ ಮಾಡಿದೆ. ಜೊತೆಗೆ ಡಿವಿ ಸದಾನಂದಗೌಡ ಬದಲು ಆರ್. ಅಶೋಕ್ ಅವರಿಗೇ ಸ್ಪರ್ಧಿಸಬಾರದು ಯಾಕೆ ಎಂದು ಕೇಳಿದೆ ಎನ್ನಲಾಗಿದೆ. ಆದರೆ ಆರ್.ಅಶೋಕ್ ಸದ್ಯಕ್ಕೆ ಶಾಸಕ ಮತ್ತು ವಿಪಕ್ಷ ನಾಯಕರಾಗಿದ್ದಾರೆ. ಅವರು ಲೋಕಸಭೆಗೆ ಸ್ಪರ್ಧಿಸುತ್ತಾರಾ ಗೊತ್ತಿಲ್ಲ.

ಆದರೆ ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಕಳೆದ ಬಾರಿ ಡಿವಿ ಸದಾನಂದ ಗೌಡ ಸಂಸದರಾಗಿ ಆಯ್ಕೆಯಾಗಿದ್ದರು. ಆದರೆ ಅವರು ಇದುವರೆಗೆ ತಮ್ಮ ಕ್ಷೇತ್ರದಲ್ಲಿ ಹೆಚ್ಚಿನ ಕೆಲಸ ಮಾಡಿಲ್ಲ ಎನ್ನುವ ಅಸಮಾಧಾನವೂ ಕ್ಷೇತ್ರದ ಜನರಲ್ಲಿದೆ. ಹೀಗಾಗಿ ಅವರು ಮತ್ತೆ ನಿಂತರೆ ಬಿಜೆಪಿ ಗೆಲ್ಲಬಹುದು ಎಂಬ ನಿರೀಕ್ಷೆಯೂ ಇಲ್ಲ. ಹೀಗಾಗಿ ಅವರನ್ನು ಕಣಕ್ಕಿಳಿಸಲು ಹೈಕಮಾಂಡ್ ಗೂ ಅಷ್ಟು ಒಲವಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments