Select Your Language

Notifications

webdunia
webdunia
webdunia
webdunia

ಉಸ್ತುವಾರಿ ಮುಂದೆ ಶಕ್ತಿಪ್ರದರ್ಶನ ಮಾಡಲು ಮುಂದಾದ ಸಿಎಂ ಬಣ

ಉಸ್ತುವಾರಿ ಮುಂದೆ ಶಕ್ತಿಪ್ರದರ್ಶನ ಮಾಡಲು ಮುಂದಾದ ಸಿಎಂ ಬಣ
ಬೆಂಗಳೂರು , ಮಂಗಳವಾರ, 15 ಜೂನ್ 2021 (11:16 IST)
ಬೆಂಗಳೂರು: ಸಿಎಂ ಬದಲಾವಣೆಗೆ ಆಗ್ರಹಿಸುತ್ತಿರುವ ವಿರೋಧಿಗಳಿಗೆ ಸೆಡ್ಡು ಹೊಡೆಯಲು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಮುಂದೆ ಶಕ್ತಿ ಪ್ರದರ್ಶನ ಮಾಡಲು ಯಡಿಯೂರಪ್ಪ ಬಣದ ನಾಯಕರು ಮುಂದಾಗಿದ್ದಾರೆ.

 

ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ನೇತೃತ್ವದಲ್ಲಿ ಶಾಸಕರು ಜೂನ್ 17 ರಂದು ಅರುಣ್ ಸಿಂಗ್ ಭೇಟಿ ಮಾಡಿ ಒಗ್ಗಟ್ಟು ಪ್ರದರ್ಶನ ಮಾಡಲಿದ್ದಾರೆ. ಈ ಬಗ್ಗೆ ರೇಣುಕಾಚಾರ್ಯ ಮಾಹಿತಿ ನೀಡಿದ್ದಾರೆ.

ಅರುಣ್ ಸಿಂಗ್ ಈಗಾಗಲೇ ಯಡಿಯೂರಪ್ಪನವರೇ ನಮ್ಮ ನಾಯಕ ಎಂದಿದ್ದರು. ಹಾಗಿದ್ದರೂ ಕೆಲವರು ನಾಯಕತ್ವ ವಿಚಾರವನ್ನು ಎಳೆದು ತರುತ್ತಿದ್ದಾರೆ. ಹೀಗಾಗಿ ಒಗ್ಗಟ್ಟು ಪ್ರದರ್ಶಿಸುತ್ತೇವೆ ಎಂದು ರೇಣುಕಾಚಾರ್ಯ ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಗಲ್ವಾನ್ ಘರ್ಷಣೆಗೆ ಒಂದು ವರ್ಷ